ಬಿಜೆಪಿಯ ವಿಜಯ ವರ್ಗೀಯ ಅವರ  ಚುನ್ನು ಮುನ್ನು ಹೇಳಿಕೆ ನೀತಿ ಸಂಹಿತೆ ಉಲ್ಲಂಘನೆ: ಚುನಾವಣಾ ಆಯೋಗ

ಬಿಜೆಪಿ ನಾಯಕ ಕೈಲಾಶ್ ವಿಜಯವರ್ಗೀಯ ಅವರು ನೀಡಿರುವ ಚುನ್ನು ಮುನ್ನು ಹೇಳಿಕೆಯಿಂದ ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆಯಾಗಿದೆ ಎಂದು ಚುನಾವಣಾ ಆಯೋಗ ಹೇಳಿದೆ. 
ಬಿಜೆಪಿಯ ವಿಜಯ ವರ್ಗೀಯ ಅವರ  ಚುನ್ನು ಮುನ್ನು ಹೇಳಿಕೆ ನೀತಿ ಸಂಹಿತೆ ಉಲ್ಲಂಘನೆ: ಚುನಾವಣಾ ಆಯೋಗ
ಬಿಜೆಪಿಯ ವಿಜಯ ವರ್ಗೀಯ ಅವರ  ಚುನ್ನು ಮುನ್ನು ಹೇಳಿಕೆ ನೀತಿ ಸಂಹಿತೆ ಉಲ್ಲಂಘನೆ: ಚುನಾವಣಾ ಆಯೋಗ

ನವದೆಹಲಿ: ಬಿಜೆಪಿ ನಾಯಕ ಕೈಲಾಶ್ ವಿಜಯವರ್ಗೀಯ ಅವರು ನೀಡಿರುವ ಚುನ್ನು ಮುನ್ನು ಹೇಳಿಕೆಯಿಂದ ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆಯಾಗಿದೆ ಎಂದು ಚುನಾವಣಾ ಆಯೋಗ ಹೇಳಿದೆ. 

ಮಧ್ಯಪ್ರದೇಶದ ಉಪಚುನಾವಣಾ ಪ್ರಚಾರದಲ್ಲಿ ತೊಡಗಿರುವ ವಿಜಯವರ್ಗೀಯ, ಇಂದೋರ್, ಸಾನ್ವೆರ್ ನಲ್ಲಿ ನಡೆದ ಚುನಾವಣಾ ಪ್ರಚಾರದಲ್ಲಿ ದಿಗ್ವಿಜಯ್ ಸಿಂಗ್ ಹಾಗೂ ಕಮಲ್ ನಾಥ್ ಕುರಿತು ಚುನ್ನು-ಮುನ್ನು ಎಂಬ ಹೇಳಿಕೆ ನೀಡಿದ್ದರು. 

ಈ ಬಗ್ಗೆ ಬಿಜೆಪಿ ನಾಯಕನಿಗೆ ಎಚ್ಚರಿಕೆ ವಿಧಿಸಿರುವ ಚುನಾವಣಾ ಆಯೋಗ, ಸಾರ್ವಜನಿಕ ಸಭೆಗಳಲ್ಲಿ ಈ ರೀತಿಯ ಹೇಳಿಕೆಗಳು ಚುನಾವಣಾ ನೀತಿ ಸಂಹಿತೆಗೆ ವಿರುದ್ಧವಾಗಿದ್ದು, ಇಂತಹ ಹೇಳಿಕೆಗಳನ್ನು ನೀಡದಂತೆ ಎಚ್ಚರಿಕೆ ನೀಡಿದೆ. ಅ.26 ರಂದು ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಆಯೋಗ ಬಿಜೆಪಿ ನಾಯಕನಿಗೆ ಪ್ರತಿಕ್ರಿಯೆ ನೀಡಲು ಸೂಚಿಸಿತ್ತು.

ಮಧ್ಯಪ್ರದೇಶದ 28 ವಿಧಾನಸಭಾ ಕ್ಷೇತ್ರಗಳಿಗೆ ನ.03 ರಂದು ಉಪಚುನಾವಣೆ ನಡೆಯಲಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com