ಶ್ರೀನಗರ: ಮಾಜಿ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ನೇತೃತ್ವದ ‘ಗುಪ್ಕಾರ್ ನಿರ್ಣಯಕ್ಕಾಗಿ ಜನರ ಮೈತ್ರಿ’ (ಪೀಪಲ್ಸ್ ಅಲಯೆನ್ಸ್) ನಿಯೋಗ ಶುಕ್ರವಾರ ಮುಂಜಾನೆ ಕೇಂದ್ರಾಡಳಿತ ಪ್ರದೇಶದ ಲಡಾಖ್ನ ಗಡಿ ಪಟ್ಟಣವಾದ ಕಾರ್ಗಿಲ್ಗೆ ತೆರಳಿದೆ.
ಕಳೆದ ಆಗಸ್ಟ್ 5 ರಂದು 370 ಮತ್ತು 35 ಎ ನೇ ವಿಧಿಗಳನ್ನು ರದ್ದುಗೊಳಿಸಿದ ನಂತರ ಕಾರ್ಗಿಲ್ ಗೆ ಭೇಟಿ ನೀಡುತ್ತಿರುವ ಕಾಶ್ಮೀರದ ಮುಖ್ಯವಾಹಿನಿಯ ರಾಜಕೀಯ ನಾಯಕರ ನಿಯೋಗ ಇದಾಗಿದೆ. ಕಾರ್ಗಿಲ್ನಲ್ಲಿ ಜನರು ಹಿಂದಿನ ರಾಜ್ಯವನ್ನು ವಿಭಜನೆಗೆ ವಿರೋಧಿಸಿದ್ದಾರೆ. ರಾಜ್ಯವನ್ನು ಪುನರ್ ಸ್ಥಾಪನೆಗೆ ಒತ್ತಾಯಿಸಿದ್ದಾರೆ. ಅಲ್ಲದೆ, ಲಡಾಖ್ ಕೇಂದ್ರಾಡಳಿತ ಪ್ರದೇಶದ ಬದಲಿಗೆ ಜಮ್ಮು-ಕಾಶ್ಮೀರದ ಭಾಗವಾಗಿರಲು ಇಚ್ಛಿಸಿದ್ದಾರೆ.
ನಿಯೋಗ ಶುಕ್ರವಾರ ಮುಂಜಾನೆ ಬೇಸಿಗೆ ರಾಜಧಾನಿ ಶ್ರೀನಗರದಿಂದ ಹೊರಟು ಕಾರ್ಗಿಲ್ಗೆ ತೆರಳಿದೆ ಎಂದು ಮೂಲಗಳು ತಿಳಿಸಿವೆ. ನಿಯೋಗದ ಸದಸ್ಯರನ್ನು ಬರಮಾಡಿಕೊಳ್ಳಲು ಹೆಚ್ಚಿನ ಸಂಖ್ಯೆಯ ರಾಜಕೀಯ ಮುಖಂಡರು ಮತ್ತು ಕಾರ್ಯಕರ್ತರು ದ್ರಾಸ್ಗೆ ಧಾವಿಸಿದ್ದಾರೆ ಎಂದು ವರದಿಗಳು ತಿಳಿಸಿವೆ.
Advertisement