ಚೆನ್ನೈ: ಮಹಾಮಾರಿ ಕೊರೋನಾ ವೈರಸ್ ಲಾಕ್ ಡೌನ್ ನಂತರ ತಮಿಳುನಾಡಿನಲ್ಲಿ ಮಂಗಳವಾರದಿಂದ ಬಸ್ ಸೇವೆ ಪುನಾರಂಭಗೊಂಡಿದ್ದು, ಸೆಪ್ಟೆಂಬರ್ 7ರಿಂದ ಅಂತರ್ ಜಿಲ್ಲಾ ಹಾಗೂ ಪ್ಯಾಸೆಂಜರ್ ರೈಲು ಸಂಚಾರ ಆರಂಭವಾಗಲಿದೆ.
ತಮಿಳುನಾಡಿನ ಒಳಗಡೆಯೇ ಅಂತರ್ ಜಿಲ್ಲಾ ಬಸ್ ಸಂಚಾರ ಹಾಗೂ ಪ್ಯಾಸೆಂಜರ್ ರೈಲು ಸಂಚಾರಕ್ಕೆ ರಾಜ್ಯ ಸರ್ಕಾರ ಅನುಮತಿ ನೀಡಿದೆ ಎಂದು ತಮಿಳುನಾಡು ಮುಖ್ಯಮಂತ್ರಿ ಪಳನಿಸ್ವಾಮಿ ಅವರು ಹೇಳಿದ್ದಾರೆ.
ತಮಿಳುನಾಡಿನಲ್ಲಿ ನಿನ್ನೆಯಿಂದ ರಾಜ್ಯ ರಸ್ತೆ ಸಾರಿಗೆ ಹಾಗೂ ಮೆಟ್ರೋಪಾಲಿಟನ್ ಟ್ರಾನ್ಸ್ಪೋರ್ಟ್ ಕಾರ್ಪೊರೇಷನ್(ಎಂಟಿಸಿ) ಸಂಚಾರ ಆರಂಭವಾಗಿದೆ. ಇದೀಗ ಅಂತರ್ ಜಿಲ್ಲಾ ಸಂಚಾರಕ್ಕೂ ಅನುಮತಿ ನೀಡಲಾಗಿದೆ.
Advertisement