ತ.ನಾಡಿನ ಕದ್ದಲೂರಿನ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ:7 ಮಂದಿ ಸಾವು, ನಾಲ್ವರಿಗೆ ಗಾಯ

ಪಟಾಕಿ ಕಾರ್ಖಾನೆಯಲ್ಲಿ ದುರಂತ ಮತ್ತೆ ಸಂಭವಿಸಿದೆ. ತಮಿಳು ನಾಡಿನ ಕದ್ದಲೂರು ಜಿಲ್ಲೆಯ ಪಟಾಕಿ ಕಾರ್ಖಾನೆಯೊಂದರಲ್ಲಿ ಶುಕ್ರವಾರ ಸ್ಫೋಟ ಸಂಭವಿಸಿ 7 ಮಂದಿ ಮೃತಪಟ್ಟು ನಾಲ್ವರು ಗಾಯಗೊಂಡಿದ್ದಾರೆ ಎಂದು ಜಿಲ್ಲಾ ಎಸ್ಪಿ ಎಂ ಶ್ರೀ ಅಭಿನವ್ ತಿಳಿಸಿದ್ದಾರೆ.
ಸ್ಫೋಟದ ನಂತರದ ದೃಶ್ಯ
ಸ್ಫೋಟದ ನಂತರದ ದೃಶ್ಯ

ಚೆನ್ನೈ: ಪಟಾಕಿ ಕಾರ್ಖಾನೆಯಲ್ಲಿ ದುರಂತ ಮತ್ತೆ ಸಂಭವಿಸಿದೆ. ತಮಿಳು ನಾಡಿನ ಕದ್ದಲೂರು ಜಿಲ್ಲೆಯ ಪಟಾಕಿ ಕಾರ್ಖಾನೆಯೊಂದರಲ್ಲಿ ಶುಕ್ರವಾರ ಸ್ಫೋಟ ಸಂಭವಿಸಿ 7 ಮಂದಿ ಮೃತಪಟ್ಟು ನಾಲ್ವರು ಗಾಯಗೊಂಡಿದ್ದಾರೆ ಎಂದು ಜಿಲ್ಲಾ ಎಸ್ಪಿ ಎಂ ಶ್ರೀ ಅಭಿನವ್ ತಿಳಿಸಿದ್ದಾರೆ.

ರಾಜಧಾನಿ ಚೆನ್ನೈಯಿಂದ 190 ಕಿಲೋ ಮೀಟರ್ ದೂರದಲ್ಲಿ ಕದ್ದಲೂರು ಜಿಲ್ಲೆಯ ಕಟ್ಟುಮನ್ನರ್ಕೊಯ್ಲ್ ಎಂಬಲ್ಲಿ ಈ ದುರ್ಘಟನೆ ನಡೆದಿದ್ದು ಸ್ಫೋಟಕ್ಕೆ ಕಾರಣವೇನು ಎಂಬುದನ್ನು ತನಿಖಾ ತಂಡ ಪತ್ತೆಹಚ್ಚುವ ಕಾರ್ಯದಲ್ಲಿ ನಿರತವಾಗಿದೆ. ಗಾಯಗೊಂಡವರನ್ನು ಆಸ್ಪತ್ರೆಗೆ ಸಾಗಿಸಲಾಗುತ್ತಿದ್ದು ಹೆಚ್ಚಿನ ಮಾಹಿತಿ ಸಿಗಬೇಕಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com