ಪಾಕ್ ನಿಂದ ಕದನ ವಿರಾಮ ಉಲ್ಲಂಘನೆ: ಭಾರತೀಯ ಸೇನಾ ಪಡೆಗಳಿಂದ ತಕ್ಕ ಪ್ರತ್ಯುತ್ತರ

ಜಮ್ಮು- ಕಾಶ್ಮೀರದ ರಜೌರಿ ಜಿಲ್ಲೆಯ ಗಡಿ ನಿಯಂತ್ರಣ ರೇಖೆಯ ಉದ್ದಕ್ಕೂ ಅಪ್ರಚೋದಿತ ಗುಂಡು ಹಾರಿಸುವ ಮೂಲಕ ಪಾಕಿಸ್ತಾನ ಪಡೆಗಳು ಸೋಮವಾರ ಮತ್ತೊಮ್ಮೆ ಕದನ ವಿರಾಮವನ್ನು ಉಲ್ಲಂಘಿಸಿವೆ.
ಭಾರತೀಯ ಸೇನೆ
ಭಾರತೀಯ ಸೇನೆ

ಜಮ್ಮು: ಜಮ್ಮು- ಕಾಶ್ಮೀರದ ರಜೌರಿ ಜಿಲ್ಲೆಯ ಗಡಿ ನಿಯಂತ್ರಣ ರೇಖೆಯ ಉದ್ದಕ್ಕೂ ಅಪ್ರಚೋದಿತ ಗುಂಡು ಹಾರಿಸುವ ಮೂಲಕ ಪಾಕಿಸ್ತಾನ ಪಡೆಗಳು ಸೋಮವಾರ ಮತ್ತೊಮ್ಮೆ ಕದನ ವಿರಾಮವನ್ನು ಉಲ್ಲಂಘಿಸಿವೆ.

ರಜೌರಿ ಜಿಲ್ಲೆಯ ಸುಂದರ್‌ಬಾನಿ ಸೆಕ್ಟರ್‌ನಲ್ಲಿ ಸೋಮವಾರ ಸಂಜೆ 5 ಗಂಟೆಗೆ ಪಾಕಿಸ್ತಾನ ಸಣ್ಣ ಶಸ್ತ್ರಾಸ್ತ್ರಗಳೊಂದಿಗೆ ಗುಂಡು ಹಾರಿಸುವುದರ ಮೂಲಕ ಮತ್ತು ಮೊರ್ಟಾರ್‌ಗಳೊಂದಿಗೆ ಶೆಲ್‍ ದಾಳಿ ನಡೆಸುವ ಮೂಲಕ ಗಡಿ ನಿಯಂತ್ರಣಾ ರೇಖೆಯುದ್ದಕ್ಕೂ ಅಪ್ರಚೋದಿತ ಕದನ ವಿರಾಮ ಉಲ್ಲಂಘನೆಗೆ ಚಾಲನೆ ನೀಡಿವೆ ಎಂದು ರಕ್ಷಣಾ ವಕ್ತಾರರು ತಿಳಿಸಿದ್ದಾರೆ.

"ಪಾಕ್‍ ಪಡೆಗಳ ಗುಂಡಿನ ದಾಳಿಗೆ ಭಾರತೀಯ ಸೇನೆ ಸೂಕ್ತವಾಗಿ ಪ್ರತ್ಯುತ್ತರ ನೀಡುತ್ತಿದೆ.’ ಎಂದು ವಕ್ತಾರರು ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com