ಕಂಗನಾ ವಿರುದ್ಧ ಕ್ರಮ ಕೈಗೊಳ್ಳಲು ಸದನ ನಿರ್ಣಯಕ್ಕೆ ಶಿವಸೇನಾ ಶಾಸಕ ಆಗ್ರಹ

ನಟಿ ಕಂಗನಾ ರನೌತ್ ವಿರುದ್ಧ ಕಾನೂನು ಕ್ರಮ ಜರುಗಿಸಲು ಮಹಾರಾಷ್ಟ್ರ ವಿಧಾನಸಭೆಯಲ್ಲಿ ಸರ್ವಾನುಮತದ ನಿರ್ಣಯವನ್ನು ಕೈಗೊಳ್ಳಬೇಕು ಎಂದು ಶಿವಸೇನೆ ಶಾಸಕ ಪ್ರತಾಪ್ ಸರ್ನಾಯಕ್ ಅವರು ಸೋಮವಾರ ಒತ್ತಾಯಿಸಿದ್ದಾರೆ.
ಕಂಗನಾ
ಕಂಗನಾ

ಮುಂಬೈ: ನಟಿ ಕಂಗನಾ ರನೌತ್ ವಿರುದ್ಧ ಕಾನೂನು ಕ್ರಮ ಜರುಗಿಸಲು ಮಹಾರಾಷ್ಟ್ರ ವಿಧಾನಸಭೆಯಲ್ಲಿ ಸರ್ವಾನುಮತದ ನಿರ್ಣಯವನ್ನು ಕೈಗೊಳ್ಳಬೇಕು ಎಂದು ಶಿವಸೇನೆ ಶಾಸಕ ಪ್ರತಾಪ್ ಸರ್ನಾಯಕ್ ಅವರು ಸೋಮವಾರ ಒತ್ತಾಯಿಸಿದ್ದಾರೆ.

ನಟಿ ಕಂಗನಾ ಮಹಾರಾಷ್ಟ್ರ ಮತ್ತು ಮುಂಬೈ ಬಗ್ಗೆ ಟ್ವೀಟ್ ಮೂಲಕ "ಅಪಚಾರ" ಮಾಡುತ್ತಿದ್ದಾರೆ ಎಂದು ಶಿವಸೇನಾ ಶಾಸಕ ಆರೋಪಿಸಿದ್ದಾರೆ.

ಈ ಸಂಬಂಧ ನಾನು ಡೆಪ್ಯೂಟಿ ಸ್ಪೀಕರ್ ನರಹರಿ ಝಿರ್ವಾಲ್ ಅವರಿಗೆ ಪತ್ರ ಬರೆದಿದ್ದು, ಅವರು "24 ಗಂಟೆಗಳ ಒಳಗೆ ಅಗತ್ಯ ಕ್ರಮ ಕೈಗೊಳ್ಳಲು ಮತ್ತು ವರದಿ ಸಲ್ಲಿಸುವಂತೆ ರಾಜ್ಯ ಗೃಹ ಸಚಿವ ಅನಿಲ್ ದೇಶಮುಖ್ ಅವರಿಗೆ ನಿರ್ದೇಶನ ನೀಡಿದ್ದಾರೆ" ಎಂದು ಸರ್ನಾಯಕ್ ಅವರು ವರದಿಗಾರರಿಗೆ ತಿಳಿಸಿದ್ದಾರೆ.

ನಟಿ ಮುಂಬೈಯನ್ನು "ತಾಲಿಬಾನ್" ಗೆ ಹೋಲಿಸಿದ್ದಾರೆ ಎಂದು ಶಾಸಕರು ದೂರಿದ್ದಾರೆ.

"ನಟಿ ಕಂಗನಾ ರನೌತ್ ಅವರು ಮುಂಬೈಯನ್ನು ಪಿಒಕೆ(ಪಾಕಿಸ್ತಾನ ಆಕ್ರಮಿತ ಕಾಶ್ಮೀರ)ಗೆ ಹೋಲಿಸಿದ್ದರು ಮತ್ತು ತಾನು ಮುಂಬೈ ಪೊಲೀಸರನ್ನು ನಂಬುವುದಿಲ್ಲ ಎಂದು ಹೇಳಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com