ಕೋವಿಡ್-19ನಿಂದ ಗುಣಮುಖರಾದ  ಕೇಂದ್ರ ಸಚಿವ ಶ್ರೀಪಾದ್ ಯೆಸ್ಸೋ ನಾಯಕ್ ಆಸ್ಪತ್ರೆಯಿಂದ ಡಿಸ್ಚಾರ್ಜ್ 

 ಕೋವಿಡ್-19 ಸಾಂಕ್ರಾಮಿಕ ಕಾಯಿಲೆಯಿಂದ ಗುಣಮುಖರಾಗಿರುವ ಕೇಂದ್ರ ಆಯುಷ್ ಮತ್ತು ರಕ್ಷಣಾ ಖಾತೆ ಸಹಾಯಕ ಸಚಿವ ಶ್ರೀಪಾದ್ ಯೆಸ್ಸೋ ನಾಯಕ್ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಕಳೆದ ತಿಂಗಳು ಕೋವಿಡ್-19 ಪಾಸಿಟಿವ್ ಕಂಡುಬಂದಿದ್ದರಿಂದ ಯೆಸ್ಸೂ ನಾಯಕ್ ಆಸ್ಪತ್ರೆಗೆ  ದಾಖಲಾಗಿದ್ದರು.
ಕೇಂದ್ರ ಸಚಿವ ಶ್ರೀಪಾದ್ ಯೆಸ್ಸೋ ನಾಯಕ್
ಕೇಂದ್ರ ಸಚಿವ ಶ್ರೀಪಾದ್ ಯೆಸ್ಸೋ ನಾಯಕ್

ನವದೆಹಲಿ: ಕೋವಿಡ್-19 ಸಾಂಕ್ರಾಮಿಕ ಕಾಯಿಲೆಯಿಂದ ಗುಣಮುಖರಾಗಿರುವ ಕೇಂದ್ರ ಆಯುಷ್ ಮತ್ತು ರಕ್ಷಣಾ ಖಾತೆ ಸಹಾಯಕ ಸಚಿವ ಶ್ರೀಪಾದ್ ಯೆಸ್ಸೋ ನಾಯಕ್ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಕಳೆದ ತಿಂಗಳು ಕೋವಿಡ್-19 ಪಾಸಿಟಿವ್ ಕಂಡುಬಂದಿದ್ದರಿಂದ ಯೆಸ್ಸೂ ನಾಯಕ್ ಆಸ್ಪತ್ರೆಗೆ  ದಾಖಲಾಗಿದ್ದರು.

'ದೇವರ  ಆಶೀರ್ವಾದದಿಂದ ಕೋವಿಡ್-19 ಪರೀಕ್ಷೆಯಲ್ಲಿ ನೆಗೆಟಿವ್ ಬಂದಿದ್ದು, ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದೇನೆ. ಕಷ್ಟದ ಹಂತದಲ್ಲಿ ಸಹಕರಿಸಿ ತಮ್ಮ ಮೇಲೆ ಕಾಳಜಿ ವಹಿಸಿದ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಧನ್ಯವಾದ ಹೇಳುವುದಾಗಿ ಕೇಂದ್ರ ಸಚಿವರು ಟ್ವೀಟ್ ಮಾಡಿದ್ದಾರೆ.

ಆರೋಗ್ಯದಲ್ಲಿ ಅನೇಕ ಏರುಪೇರುಗಳು ಆದ ಬಳಿಕ ಇದೀಗ ಸಕಾರಾತ್ಮಕವಾಗಿ ಚೇತರಿಸಿಕೊಂಡಿದ್ದು, ತಮ್ಮಗೆ ಯಶಸ್ವಿಯಾದ ಉತ್ತಮ ರೀತಿಯ ಚಿಕಿತ್ಸೆ ನೀಡಿದ ಗೋವಾದ ಮಣಿಪಾಲ್ ಆಸ್ಪತ್ರೆಯ ಪ್ರತಿಯೊಬ್ಬ ಸಿಬ್ಬಂದಿಯೂ ಶ್ರಮಿಸುವ ಮೂಲಕ  ತುಂಬಾ ನೆರವಾಗಿರುವುದಾಗಿ ಹೇಳಿರುವ ಯೆಸ್ಸೋ ನಾಯಕ್, ಗೋವಾದ ಮುಖ್ಯಮಂತ್ರಿ  ಪ್ರಮೋದ್ ಸಾವಂತ್ ಮತ್ತಿತರರಿಗೂ ಕೃತಜ್ಞತೆ ಸಲ್ಲಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com