ನವದೆಹಲಿ: ಮೃತ/ಸೋಂಕಿತ ಕೋವಿಡ್ ವಾರಿಯರ್ ಗಳ ದತ್ತಾಂಶ ಕೇಂದ್ರದ ಮಟ್ಟದಲ್ಲಿ ದಾಖಲಾಗಿಲ್ಲ ಎಂದು ಸರ್ಕಾರ ತಿಳಿಸಿದೆ.
ಲೋಕಸಭೆಯಲ್ಲಿ ದತ್ತಾಂಶದ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿರುವ ಆರೋಗ್ಯ ಇಲಾಖೆ ರಾಜ್ಯ ಸಚಿವ ಅಶ್ವಿನಿ ಚೌಬೆ, ಆದರೆ ಕೋವಿಡ್-19 ವಿರುದ್ಧ ಹೋರಾಡುತ್ತಿರುವ ಆರೋಗ್ಯ ಕಾರ್ಯಕರ್ತರಿಗಾಗಿ ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ ವಿಮೆ ಪ್ಯಾಕೇಜ್ ಅಡಿಯಲ್ಲಿ ಪರಿಹಾರ ಪಡೆದಿರುವವರ ದತ್ತಾಂಶ ಸರ್ಕಾರದ ಬಳಿ ಇದೆ ಎಂದು ಅವರು ತಿಳಿಸಿದ್ದಾರೆ.
ಯೋಜನೆಯ ಮಾಹಿತಿಯ ಪ್ರಕಾರ 155 ಮಂದಿ ಆರೋಗ್ಯ ಕಾರ್ಯಕರ್ತರು, 64 ವೈದ್ಯರು ಕೊರೋನಾದಿಂದ ಸಾವನ್ನಪ್ಪಿದ್ದಾರೆ ಎಂದು ಸಚಿವರು ತಿಳಿಸಿದ್ದಾರೆ.
ಮೃತರ ಕುಟುಂಬಕ್ಕೆ ಪರಿಹಾರ ಅಥವಾ ಉದ್ಯೋಗದ ಕುರಿತ ಪ್ರಶ್ನೆಗೆ ಉತ್ತರಿಸಿರುವ ಅವರು ಕೋವಿಡ್-19 ಗೆ ಸಂಬಂಧಿಸಿದಂತೆ ನಿರ್ದಿಷ್ಟವಾದ ಯಾವುದೇ ಯೋಜನೆಯೂ ಇಲ್ಲ ಎಂದು ಹೇಳಿದ್ದಾರೆ. ಆರೋಗ್ಯ ಸೇವೆ ಒದಗಿಸುವವರು ಹಾಗೂ ಸಮುದಾಯ ಆರೋಗ್ಯ ಕಾರ್ಯಕರ್ತರಿಗೆ ಈ ಯೋಜನೆ 50 ಲಕ್ಷಗಳ ವಿಮೆಯನ್ನು ಒದಗಿಸುತ್ತದೆ.
Advertisement