ಲಖನೌ: ಮಹಾಭಾರತದಲ್ಲಿ ಕುರುಗಳ ರಾಜಧಾನಿಯಾಗಿದ್ದ ಇತಿಹಾಸ ಪ್ರಸಿದ್ಧ ನಗರಿ ಹಸ್ತಿನಾಪುರಕ್ಕೆ ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಭರ್ಜರಿ ಗಿಫ್ಟ್ ನ್ನು ನೀಡಿದ್ದಾರೆ.
ಸಿನಿಮಾ ಕ್ಷೇತ್ರದ ಸದಸ್ಯರೊಂದಿಗೆ ವಿಡಿಯೋ ಸಭೆ ನಡೆಸಿದ ಬಳಿಕ ಮಾತನಾಡಿರುವ ಸಿಎಂ ಯೋಗಿ ಆದಿತ್ಯನಾಥ್, ಹಸ್ತಿನಾಪುರದಲ್ಲಿ ಭಾರತದ ಅತಿ ದೊಡ್ಡ ಸಿನಿಮಾ ಸಿಟಿಯನ್ನು ನಿರ್ಮಾಣ ಮಾಡುವುದಾಗಿ ಘೋಷಿಸಿದ್ದಾರೆ.
ಯಮುನಾ ಎಕ್ಸ್ ಪ್ರೆಸ್ ವೇ ನಲ್ಲಿ ಸಿನಿಮಾ ಸಿಟಿ ನಿರ್ಮಾಣವಾಗಲಿದೆ ಎಂದು ಯೋಗಿ ಆದಿತ್ಯನಾಥ್ ಘೋಷಿಸಿದ್ದಾರೆ.
ಯಮುನಾ ಎಕ್ಸ್ ಪ್ರೆಸ್ ವೇ ಇಂಡಸ್ಟ್ರಿಯಲ್ ಡೆವಲ್ಪ್ಮೆಂಟ್ ಅಥಾರಿಟಿ ಈ ಕುರಿತು ಈಗಾಗಲೇ ಪ್ರಸ್ತಾವನೆ ಸಲ್ಲಿಸಿದೆ, ಈ ಸಿನಿಮಾ ಸಿಟಿ ಭಾರತದ ಹೆಗ್ಗುರುತಾಗಲಿದೆ ಎಂದು ಯೋಗಿ ಆದಿತ್ಯನಾಥ್ ಹೇಳಿದ್ದಾರೆ.
Advertisement