ಕದನ ವಿರಾಮ ಉಲ್ಲಂಘಿಸಿ ಪಾಕ್‌ನಿಂದ ಗುಂಡಿನ ದಾಳಿ, ಭಾರತೀಯ ಯೋಧನಿಗೆ ಗಾಯ!

ಕದನ ವಿರಾಮ ಉಲ್ಲಂಘಿಸಿ ಗಡಿಯಲ್ಲಿ ಪಾಕ್ ಸೈನಿಕರು ಗುಂಡಿನ ದಾಳಿ ನಡೆಸಿದ್ದು ದಾಳಿಯಲ್ಲಿ ಭಾರತೀಯ ಯೋಧನೋರ್ವ ಗಾಯಗೊಂಡಿದ್ದಾರೆ.
ಭಾರತೀಯ ಸೇನೆ
ಭಾರತೀಯ ಸೇನೆ

ಶ್ರೀನಗರ: ಕದನ ವಿರಾಮ ಉಲ್ಲಂಘಿಸಿ ಗಡಿಯಲ್ಲಿ ಪಾಕ್ ಸೈನಿಕರು ಗುಂಡಿನ ದಾಳಿ ನಡೆಸಿದ್ದು ದಾಳಿಯಲ್ಲಿ ಭಾರತೀಯ ಯೋಧನೋರ್ವ ಗಾಯಗೊಂಡಿದ್ದಾರೆ. 

ಜಮ್ಮು ಮತ್ತು ಕಾಶ್ಮೀರದ ಮಾಚಿಲ್ ಸೆಕ್ಟರ್ ಬಳಿ ಪಾಕ್ ಸೈನಿಕರು ಸಣ್ಣ ಪಿರಂಗಿ ಬಳಸಿ ದಾಳಿ ನಡೆಸಿದ್ದಾರೆ. ಪರಿಣಾಮ ಯೋಧನೋರ್ವ ಗಾಯಗೊಂಡಿದ್ದು ಅವರನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಲಾಗಿದ್ದು ಅವರ ಪರಿಸ್ಥಿತಿ ಸ್ಥಿರವಾಗಿದೆ ಎಂದು ರಕ್ಷಣಾ ವಕ್ತಾರರು ಮಾಹಿತಿ ನೀಡಿದ್ದಾರೆ.

ಪಾಕಿಸ್ತಾನದ ಅಪ್ರಚೋದಿತ ಗುಂಡಿನ ದಾಳಿಗೆ ಪ್ರತಿಯಾಗಿ ಭಾರತೀಯ ಸೇನೆ ಸಹ ಗುಂಡಿನ ದಾಳಿ ನಡೆಸುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com