ಹತ್ರಾಸ್ ಗ್ಯಾಂಗ್ ರೇಪ್: ಸಿಎಂ ಯೋಗಿ ಮೇಲೆ ನಂಬಿಕೆ ಇದೆ, ಹೈದರಾಬಾದ್ ಎನ್ಕೌಂಟರ್ ನೆನಪಿಸಿದ ಕಂಗನಾ!

2012ರಲ್ಲಿ ದೆಹಲಿಯಲ್ಲಿ ನಡೆದ ನಿರ್ಭಯ ಗ್ಯಾಂಗ್​ರೇಪ್​ ಮಾದರಿಯಲ್ಲೇ ಉತ್ತರ ಪ್ರದೇಶದ ಹತ್ರಾಸ್​ನಲ್ಲಿ ನಡೆದಿದ್ದು ಈ ಬಗ್ಗೆ ಆಕ್ರೋಶ ವ್ಯಕ್ತಪಡಿಸಿರುವ ನಟಿ ಕಂಗನಾ ರಣಾವತ್ ಸಿಎಂ ಯೋಗಿ ಮೇಲೆ ನಂಬಿಕೆ ಇದೆ. ಅನ್ಯಾಯವಾಗಲು ಬಿಡುವುದಿಲ್ಲ ಎಂದು ಹೇಳಿದ್ದಾರೆ.
ಯೋಗಿ ಆದಿತ್ಯನಾಥ-ಕಂಗನಾ ರಣಾವತ್
ಯೋಗಿ ಆದಿತ್ಯನಾಥ-ಕಂಗನಾ ರಣಾವತ್

ಮುಂಬೈ: 2012ರಲ್ಲಿ ದೆಹಲಿಯಲ್ಲಿ ನಡೆದ ನಿರ್ಭಯ ಗ್ಯಾಂಗ್​ರೇಪ್​ ಮಾದರಿಯಲ್ಲೇ ಉತ್ತರ ಪ್ರದೇಶದ ಹತ್ರಾಸ್​ನಲ್ಲಿ ನಡೆದಿದ್ದು ಈ ಬಗ್ಗೆ ಆಕ್ರೋಶ ವ್ಯಕ್ತಪಡಿಸಿರುವ ನಟಿ ಕಂಗನಾ ರಣಾವತ್ ಸಿಎಂ ಯೋಗಿ ಮೇಲೆ ನಂಬಿಕೆ ಇದೆ. ಅನ್ಯಾಯವಾಗಲು ಬಿಡುವುದಿಲ್ಲ ಎಂದು ಹೇಳಿದ್ದಾರೆ. 

ಕಳೆದ ವರ್ಷ ನವೆಂಬರ್‌ನಲ್ಲಿ ಹೈದರಾಬಾದ್ ನಲ್ಲಿ ನಡೆದಿದ್ದ ಅತ್ಯಾಚಾರ-ಕೊಲೆ ಪ್ರಕರಣದಲ್ಲಿ ಆರೋಪಿಗಳ ಎನ್ ಕೌಂಟರ್ ನಡೆದಿದ್ದು ಅದೇ ರೀತಿ ಕ್ರಮ ತೆಗೆದುಕೊಳ್ಳುತ್ತಾರೆ ಎಂಬ ಆಶಾಭಾವವನ್ನು ನಟಿ ವ್ಯಕ್ತಪಡಿಸಿದ್ದು ‘ಭಾವನಾತ್ಮಕ, ಸಹಜ ಮತ್ತು ಹಠಾತ್ ನ್ಯಾಯಕ್ಕಾಗಿ ಕರೆ ನೀಡಿದರು.

ಟ್ವೀಟ್ ಮಾಡಿರುವ ಕಂಗನಾ ವಿವಾದಾತ್ಮಕ ಹೈದರಾಬಾದ್ ಪ್ರಕರಣದಂತೆ ಅದೇ ರೀತಿಯ ಕ್ರಮಕ್ಕೆ ಸಂಬಂಧಿಸಿದಂತೆ ಕಂಗನಾ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ಮೇಲೆ ‘ಅಪಾರ ನಂಬಿಕೆಯನ್ನು’ ವ್ಯಕ್ತಪಡಿಸಿದ್ದಾರೆ.

ಸೆ. 14ರಂದು ಯುವತಿಯು ತಮ್ಮ ಜಮೀನಿನಲ್ಲಿ ತಾಯಿಯೊಂದಿಗೆ ಮೇವು ತರಲು ಹೋಗಿದ್ದಾಗ ನಾಲ್ವರು ಕಾಮುಕರು ಎಳೆದೊಯ್ದು ಅತ್ಯಾಚಾರವೆಸಗಿದ್ದಾರೆ. ಅಲ್ಲದೆ, ಆಕೆಯ ನಾಲಿಗೆಯನ್ನು ಕತ್ತರಿಸಿದ್ದಾರೆ. ಆಕೆಯ ಬೆನ್ನುಮೂಳೆ ಮತ್ತು ಕುತ್ತಿಗೆಗೆ ಹಾನಿ ಮಾಡಿದ್ದಾರೆ. ಗಂಭೀರ ಗಾಯಗಳಿಂದ ದೆಹಲಿಯ ಸಫ್ದಾರ್​ ಜಂಗ್​ ಆಸ್ಪತ್ರೆಗೆ ದಾಖಲಾಗಿದ್ದ ಸಂತ್ರಸ್ತೆ ಚಿಕಿತ್ಸೆ ಫಲಕಾರಿಯಾಗದೇ ನಿನ್ನೆ ಮೃತಪಟ್ಟಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com