ವಲಸಿಗರಿಗೆ ಉಚಿತ ಊಟ, ವಸತಿ ಒದಗಿಸಿ: ಸರ್ಕಾರಕ್ಕೆ ಮಾಯಾವತಿ ಆಗ್ರಹ

ಲಾಕ್ ಡೌನ್ ಭಯದಿಂದಾಗಿ ತಮ್ಮ ಸ್ವಂತ ಸ್ಥಳಗಳಿಗೆ ವಾಪಸ್ ಹೋಗಲು ನಿರ್ಧರಿಸಿರುವ ವಲಸಿಗರಿಗೆ ಸರ್ಕಾರ ಉಚಿತ ಊಟ ಮತ್ತು ವಸತಿ ನೀಡಬೇಕೇಂದು ಬಿಎಸ್ ಪಿ ಮುಖ್ಯಸ್ಥೆ ಮಾಯಾವತಿ ಸರ್ಕಾರಕ್ಕೆ ಒತ್ತಾಯಿಸಿದ್ದಾರೆ.
ಮಯಾವತಿ
ಮಯಾವತಿ
Updated on

ಲಕ್ನೋ: ಲಾಕ್ ಡೌನ್ ಭಯದಿಂದಾಗಿ ತಮ್ಮ ಸ್ವಂತ ಸ್ಥಳಗಳಿಗೆ ವಾಪಸ್ ಹೋಗಲು ನಿರ್ಧರಿಸಿರುವ ವಲಸಿಗರಿಗೆ ಸರ್ಕಾರ ಉಚಿತ ಊಟ ಮತ್ತು ವಸತಿ ನೀಡಬೇಕೇಂದು ಬಿಎಸ್ ಪಿ ಮುಖ್ಯಸ್ಥೆ ಮಾಯಾವತಿ ಸರ್ಕಾರಕ್ಕೆ ಒತ್ತಾಯಿಸಿದ್ದಾರೆ.

ಕೊರೋನಾ ವೈರಸ್ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಆರ್ಥಿಕವಾಗಿ ದುರ್ಬಲವಾಗಿರುವವರಿಗೆ ಉಚಿತ ಲಸಿಕೆ ನೀಡುವಂತೆಯೂ ಅವರು ಆಗ್ರಹಿಸಿದ್ದಾರೆ.

ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ್ ಅವರ ಜನ್ಮ ದಿನಾಚರಣೆ ಅಂಗವಾಗಿ ಪತ್ರಿಕಾ ಪ್ರಕಟಣೆ ಹೊರಡಿಸಿರುವ ಅವರು, ಮತ್ತೆ ಸರ್ಕಾರ ಲಾಕ್ ಡೌನ್ ಘೋಷಿಸುವ ಭಯದಲ್ಲಿ ವಲಸಿಗರು ತಮ್ಮ ಊರುಗಳಿಗೆ ತೆರಳಲು ಯೋಜಿಸುತ್ತಿದ್ದಾರೆ. 

ರಾಜ್ಯ ಸರ್ಕಾರಗಳು ಆಹಾರ ಮತ್ತು ವಸತಿಗಾಗಿ ಸಾಕಷ್ಟು ವ್ಯವಸ್ಥೆಗಳನ್ನು ಮಾಡಬೇಕು, ವಲಸಿಗರಿಂದ ಕೊರೋನಾ ಮತ್ತಷ್ಟು ಹರಡುವುದನ್ನು ತಪ್ಪಿಸಲು ಕೇಂದ್ರವು ರಾಜ್ಯ ಸರ್ಕಾರಗಳಿಗೂ ಸಹಾಯ ಮಾಡಬೇಕು ಎಂದು ಹೇಳಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com