ಕೋವಿಡ್-19: ಮುಂಬೈಯಲ್ಲಿ ಆಕ್ಸಿಜನ್ ಪೂರೈಕೆ, ಹಾಸಿಗೆ ಸೌಕರ್ಯ ಕುರಿತು ಮುಖ್ಯಮಂತ್ರಿ ಠಾಕ್ರೆ ನೇತೃತ್ವದಲ್ಲಿ ಸಭೆ 

ಕೋವಿಡ್-19 ಪ್ರಕರಣಗಳು ಹೆಚ್ಚಾಗುತ್ತಿರುವಂತೆಯೇ ಜನರು ಕ್ಷೀಪ್ರಗತಿಯಲ್ಲಿ ಕೋವಿಡ್-19 ಪರೀಕ್ಷೆ ವರದಿ ಪಡೆಯಬೇಕು, ಅಧಿಕಾರಿಗಳು ಪರಿಣಾಮಕಾರಿಯಾಗಿ ಹಾಸಿಗೆ , ಔಷಧಿ ನಿರ್ವಹಣೆಯೊಂದಿಗೆ ಅತ್ಯುತ್ತಮವಾದ ವೈದ್ಯಕೀಯ ಆಕ್ಸಿಜನ್ ಪೂರೈಸಬೇಕು ಎಂದು ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಶುಕ್ರವಾರ ತಿಳಿಸಿದ್ದಾರೆ.
ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ
ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ
Updated on

ಮುಂಬೈ: ಕೋವಿಡ್-19 ಪ್ರಕರಣಗಳು ಹೆಚ್ಚಾಗುತ್ತಿರುವಂತೆಯೇ ಜನರು ಕ್ಷೀಪ್ರಗತಿಯಲ್ಲಿ ಕೋವಿಡ್-19 ಪರೀಕ್ಷೆ ವರದಿ ಪಡೆಯಬೇಕು, ಅಧಿಕಾರಿಗಳು ಪರಿಣಾಮಕಾರಿಯಾಗಿ ಹಾಸಿಗೆ, ಔಷಧಿ ನಿರ್ವಹಣೆಯೊಂದಿಗೆ ಅತ್ಯುತ್ತಮವಾದ ವೈದ್ಯಕೀಯ ಆಕ್ಸಿಜನ್ ಪೂರೈಸಬೇಕು ಎಂದು ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಶುಕ್ರವಾರ ತಿಳಿಸಿದ್ದಾರೆ.

ಮುಖ್ಯಮಂತ್ರಿ ಉದ್ದವ್ ಠಾಕ್ರೆ ನೇತೃತ್ವದಲ್ಲಿ ನಡೆದ ಮುಂಬೈ ಕೋವಿಡ್-19 ಪರಿಸ್ಥಿತಿ ಪರಾಮರ್ಶನಾ ಸಭೆಯಲ್ಲಿ ಬಿಎಂಸಿ ಆಯುಕ್ತ ಐಎಸ್ ಚಹಾಲ್ ಕೂಡಾ ಪಾಲ್ಗೊಂಡಿದ್ದರು. ಮುಂಬೈಯ 153 ಕೋವಿಡ್ ಆಸ್ಪತ್ರೆಗಳಲ್ಲಿ 20,400 ಹಾಸಿಗೆಗಳಿವೆ. ಇದನ್ನು ಮುಂದಿನ  ವಾರದೊಳಗೆ 22 ಸಾವಿರಕ್ಕೆ ಹೆಚ್ಚಿಸಲಾಗುವುದು ಎಂದು ಎಂದು ಚಹಾಲ್ ತಿಳಿಸಿದರು.

ಪ್ರತಿದಿನ 8 ಸಾವಿರದಿಂದ 10 ಸಾವಿರ ಪ್ರಕರಣಗಳು ಕಂಡುಬರುತ್ತಿದ್ದು, ಸುಮಾರು 10 ಸಾವಿರ ರೋಗಿಗಳು ಪ್ರತಿದಿನ ಡಿಸ್ಚಾರ್ಜ್ ಆಗುತ್ತಿದ್ದಾರೆ. ಪ್ರಸ್ತುತ 3,900 ಹಾಸಿಗೆಗಳು ಲಭ್ಯವಿರುವುದಾಗಿ ಬಿಎಂಸಿ ಮುಖ್ಯಸ್ಥರು ಹೇಳಿದರು. 2 ಲಕ್ಷ ರೆಮಿಡಿಸಿವಿರ್ ಬಾಟಲಿಗಳನ್ನು ಖರೀದಿಸಲಾಗಿದ್ದು, 25 ಸಾವಿರ ಬಾಟಲಿಗಳು ಲಭ್ಯವಿರುವುದಾಗಿ ಅವರು ಮಾಹಿತಿ ನೀಡಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com