ಬಂಗಾಳ ಚುನಾವಣೆ: ಉತ್ತರ 24 ಪರಗಣದಲ್ಲಿ ಬಾಂಬ್ ಎಸೆದ ದುಷ್ಕರ್ಮಿಗಳು, 6 ಮಂದಿಗೆ ಗಾಯ

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಗುರುವಾರ ಆರನೇ ಹಂತದ ಮತದಾನ ನಡೆದಿದ್ದು, ಹಲವು ಕಡೆ ಹಿಂಸಾಚಾರ ನಡೆದ ಘಟನೆಗಳು ವರದಿಯಾಗಿವೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on

ಕೋಲ್ಕತಾ: ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಗುರುವಾರ ಆರನೇ ಹಂತದ ಮತದಾನ ನಡೆದಿದ್ದು, ಹಲವು ಕಡೆ ಹಿಂಸಾಚಾರ ನಡೆದ ಘಟನೆಗಳು ವರದಿಯಾಗಿವೆ.

ಉತ್ತರ 24 ಪರಗಣದಲ್ಲಿ ಕೆಲವು ದುಷ್ಕರ್ಮಿಗಳು ನಿರ್ದಾಕ್ಷಿಣ್ಯವಾಗಿ ಹಲವು ಬಾಂಬ್ ಎಸೆದಿದ್ದು, ಘಟನೆಯಲ್ಲಿ ಮಗು ಸೇರಿದಂತೆ ಆರು ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಘಟನೆಯ ನಂತರ ಭಾರೀ ಸಂಖ್ಯೆಯಲ್ಲಿ ಪೊಲೀಸ್ ಸಿಬ್ಬಂದಿ ಮತ್ತು ಸಿಎಪಿಎಫ್ ಜವಾನರು ಸ್ಥಳಕ್ಕೆ ಆಗಮಿಸಿದ್ದು, ಬಿಗಿ ಭದ್ರತೆ ಕೈಗೊಳ್ಳಲಾಗಿದೆ ಎಂದು ಅಧಿಕಾರಿ ಹೇಳಿದ್ದಾರೆ.

ಟಿಟಾಗಢದ ಟಾಟಾ ಗೇಟ್ ಬಳಿ ಅಪರಿಚಿತ ವ್ಯಕ್ತಿಗಳು ಮುಖವಾಡ ಧರಿಸಿ ಹಲವು ಕಚ್ಚಾ ಬಾಂಬ್‌ಗಳನ್ನು ಎಸೆದಿದ್ದಾರೆ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ.

"ಗಾಯಾಗೊಂಡವರನ್ನು ಬಿಎನ್ ಬೋಸ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ. ನಾವು ಈ ಬಗ್ಗೆ ಪರಿಶೀಲನೆ ನಡೆಸುತ್ತಿದ್ದೇವೆ" ಎಂದು ಅಧಿಕಾರಿ ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com