ಕುಂಭಮೇಳ ಎಫೆಕ್ಟ್: ಚಾರ್ ಧಾಮ್ ಯಾತ್ರೆ ರದ್ದುಗೊಳಿಸಿದ ಉತ್ತರಾಖಂಡ ಸರ್ಕಾರ, ಅರ್ಚಕರಿಗೆ ಮಾತ್ರ ಪೂಜೆಗೆ ಅನುಮತಿ

ಮಾರಕ ಕೊರೋನಾ ವೈರಸ್ ಸೋಂಕು ಪ್ರಕರಣಗಳ ಪ್ರಮಾಣ ಗಣನೀಯವಾಗಿ ಹೆಚ್ಚಳವಾಗುತ್ತಿರುವ ಹಿನ್ನಲೆಯಲ್ಲಿ ಉತ್ತರಾಖಂಡ ಸರ್ಕಾರ ಹಾಲಿ ವರ್ಷದ ಚಾರ್ ಧಾಮ್ ಯಾತ್ರೆಯನ್ನು ರದ್ದುಗೊಳಿಸಿದೆ.
ಕೇದರನಾಥ ದೇಗುಲ (ಸಂಗ್ರಹ ಚಿತ್ರ)
ಕೇದರನಾಥ ದೇಗುಲ (ಸಂಗ್ರಹ ಚಿತ್ರ)
Updated on

ಡೆಹ್ರಾಡೂನ್: ಮಾರಕ ಕೊರೋನಾ ವೈರಸ್ ಸೋಂಕು ಪ್ರಕರಣಗಳ ಪ್ರಮಾಣ ಗಣನೀಯವಾಗಿ ಹೆಚ್ಚಳವಾಗುತ್ತಿರುವ ಹಿನ್ನಲೆಯಲ್ಲಿ ಉತ್ತರಾಖಂಡ ಸರ್ಕಾರ ಹಾಲಿ ವರ್ಷದ ಚಾರ್ ಧಾಮ್ ಯಾತ್ರೆಯನ್ನು ರದ್ದುಗೊಳಿಸಿದೆ.

ಈ ಬಗ್ಗೆ ಉತ್ತರಾಖಂಡ ಸರ್ಕಾರ ಪ್ರಕಟಣೆ ಹೊರಡಿಸಿದ್ದು, 'ರಾಜ್ಯದಲ್ಲಿ ಕೋವಿಡ್ ಸೋಂಕು ಪ್ರಕರಣಗಳ ಸಂಖ್ಯೆ ತೀವ್ರವಾಗಿ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಈ ವರ್ಷದ ಚಾರ್ ಧಾಮ್ ಯಾತ್ರೆಯನ್ನು ರದ್ದುಪಡಿಸಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದೆ.

ರಾಜ್ಯದಲ್ಲಿನ ಕೋವಿಡ್-19 ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಈ ವರ್ಷದ ಚಾರ್ ಧಾಮ್ ಯಾತ್ರೆಯನ್ನು ಸ್ಥಗಿತಗೊಳಿಸಲಾಗಿದೆ. ಆದರೆ ಈ ನಾಲ್ಕು ದೇವಾಲಯಗಳ ಅರ್ಚಕರು ಪೂಜೆಯನ್ನು ನೆರವೇರಿಸಲಿದ್ದಾರೆ ಎಂದು ಉತ್ತರಾಖಂಡ ಮುಖ್ಯಮಂತ್ರಿ ತಿರಥ್ ಸಿಂಗ್ ರಾವತ್ ಹೇಳಿದ್ದಾರೆ. 

ಈ ಹಿಂದೆ ಕೋವಿಡ್ ಸಾಂಕ್ರಾಮಿಕದ ಹೊರತಾಗಿಯೂ ಉತ್ತರಾಖಂಡ ಸರ್ಕಾರ ಮಹಾ ಕುಂಭಮೇಳ ಆಯೋಜಿಸಿತ್ತು. ಇಲ್ಲಿ ಕೋವಿಡ್ ನಿರ್ಬಂಧನೆಗಳನ್ನು ಗಾಳಿಗೆ ತೂರಿದ್ದ ಪರಿಣಾಮ ನೂರಾರು ಯಾತ್ರಾರ್ಥಿಗಳು ಸೋಂಕಿಗೆ ತುತ್ತಾಗಿದ್ದರು. ಅಲ್ಲದೆ ಇಬ್ಬರು ಸ್ವಾಮೀಜಿಗಳೂ ಕೂಡ ಸಾವನ್ನಪ್ಪಿದ್ದರು. ಹೀಗಾಗಿ ಈ  ಧಾರ್ಮಿಕ ಕಾರ್ಯಕ್ರಮಕ್ಕೆ ವ್ಯಾಪಕ ವಿರೋಧ ವ್ಯಕ್ತವಾಗಿ, ಉತ್ತರಾಖಂಡ ಸರ್ಕಾರದ ನಡೆಗೆ ಆಕ್ರೋಶಕ್ಕೆ ತುತ್ತಾಗಿತ್ತು.
 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com