ಹೈಕೋರ್ಟ್‌ ಮತ್ತು ನ್ಯಾಯಮಂಡಳಿಗಳಲ್ಲಿ ನ್ಯಾಯಾಧೀಶರ ನೇಮಕ ಮಾಡುವಲ್ಲಿ ಕೇಂದ್ರ ಸರ್ಕಾರ ವಿಫಲ: ಚಿದಂಬರಂ

ದೇಶದ ಹಲವು ಹೈಕೋರ್ಟ್‌ ಮತ್ತು ನ್ಯಾಯಮಂಡಳಿಗಳಲ್ಲಿ ನ್ಯಾಯಾಧೀಶರು, ಅಧ್ಯಕ್ಷರ ಸ್ಥಾನಗಳು ಖಾಲಿ ಇವೆ. ಆದರೆ ಕೇಂದ್ರ ಸರ್ಕಾರ ಈ ಸ್ಥಾನಗಳನ್ನು ಭರ್ತಿ ಮಾಡಲು ವಿಫಲವಾಗಿದೆ’ ಎಂದು ಹಿರಿಯ ಕಾಂಗ್ರೆಸ್‌ ನಾಯಕ ಪಿ. ಚಿದಂಬರಂ ಆರೋಪಿಸಿದ್ದಾರೆ.
ಚಿದಂಬರಂ
ಚಿದಂಬರಂ
Updated on

ನವದೆಹಲಿ: ದೇಶದ ಹಲವು ಹೈಕೋರ್ಟ್‌ ಮತ್ತು ನ್ಯಾಯಮಂಡಳಿಗಳಲ್ಲಿ ನ್ಯಾಯಾಧೀಶರು, ಅಧ್ಯಕ್ಷರ ಸ್ಥಾನಗಳು ಖಾಲಿ ಇವೆ. ಆದರೆ ಕೇಂದ್ರ ಸರ್ಕಾರ ಈ ಸ್ಥಾನಗಳನ್ನು ಭರ್ತಿ ಮಾಡಲು ವಿಫಲವಾಗಿದೆ’ ಎಂದು ಹಿರಿಯ ಕಾಂಗ್ರೆಸ್‌ ನಾಯಕ ಪಿ. ಚಿದಂಬರಂ ಆರೋಪಿಸಿದ್ದಾರೆ.

ಈ ಸಂಬಂಧ ಟ್ವೀಟ್ ಮಾಡಿರುವ ಅವರು, ‘ಹೈಕೋರ್ಟ್‌ಗಳಿಗೆ ಮಂಜೂರಾಗಿರುವ 1,080 ನ್ಯಾಯಮೂರ್ತಿ ಹುದ್ದೆಗಳ ಪೈಕಿ 416 ಖಾಲಿಯಿವೆ.ಡಿಆರ್‌ಟಿ, ಎನ್‌ಸಿಎಲ್‌ಎಟಿ, ಟಿಡಿಎಸ್‌ಎಟಿ ಸೇರಿದಂತೆ ಹಲವು ನ್ಯಾಯಮಂಡಳಿಗಳಲ್ಲಿ ಅಧ್ಯಕ್ಷರ ಸ್ಥಾನಗಳೂ ಖಾಲಿಯಿವೆ’ ಎಂದು  ಅವರು ಹೇಳಿದ್ದಾರೆ. ‘ಏಳು ವರ್ಷಗಳಿಂದ ಮೋದಿ ನೇತೃತ್ವದ ಸರ್ಕಾರ ಅಧಿಕಾರದಲ್ಲಿದೆ. ಆದರೂ ಈ ಖಾಲಿ ಹುದ್ದೆಗಳನ್ನು ಭರ್ತಿ ಮಾಡಲು ಸರ್ಕಾರಕ್ಕೆ ಸಾಧ್ಯವಾಗಿಲ್ಲ’ ಎಂದು ದೂರಿದ್ದಾರೆ.

ನಮ್ಮ ದೇಶದಲ್ಲಿ ಈ ಸ್ಥಾನಗಳಿಗೆ ಬೇಕಾಗಿರುವ ಅರ್ಹ ವಕೀಲರು ಮತ್ತು ನ್ಯಾಯಧೀಶರ ಕೊರತೆಗಳಿಲ್ಲ. ಆದರೆ ಕೇಂದ್ರ ಸರ್ಕಾರವು ತನ್ನ ಸಿದ್ಧಾಂತಗಳ ಬಗ್ಗೆ ಸಹಾನುಭೂತಿ ಹೊಂದಿರುವ ಜನರನ್ನು ಈ ಹುದ್ದೆಗಳಿಗಾಗಿ ಹುಡುಕುತ್ತಿದೆ. ಹಾಗಾಗಿ ಈ ಸ್ಥಾನಗಳು ಖಾಲಿಯಾಗಿಯೇ ಉಳಿದಿವೆ’ ಎಂದು ಅವರು ಟ್ವೀಟ್ ಮಾಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com