ಸಂವಿಧಾನದ ತಿದ್ದುಪಡಿ ಮಸೂದೆ: ಮೋದಿ ಸರ್ಕಾರಕ್ಕೆ ವಿಪಕ್ಷಗಳಿಂದ ಬೆಂಬಲ!

ಸಂವಿಧಾನಕ್ಕೆ 127 ನೇ ತಿದ್ದುಪಡಿ ಮಸೂದೆ- ಹಿಂದುಳಿದ ವರ್ಗಗಳನ್ನು ನೋಟಿಫೈ ಮಾಡುವುದಕ್ಕೆ ರಾಜ್ಯ ಸರ್ಕಾರಗಳಿಗೆ ಸಂಪೂರ್ಣ ಅಧಿಕಾರ ನೀಡುವ ಮಸೂದೆ ಅಂಗೀಕಾರವನ್ನು ಬೆಂಬಲಿಸುವುದಾಗಿ ವಿಪಕ್ಷಗಳು ಘೋಷಿಸಿವೆ. 
ಸಂಸತ್ (ಸಂಗ್ರಹ ಚಿತ್ರ)
ಸಂಸತ್ (ಸಂಗ್ರಹ ಚಿತ್ರ)
Updated on

ನವದೆಹಲಿ: ಸಂವಿಧಾನಕ್ಕೆ 127 ನೇ ತಿದ್ದುಪಡಿ ಮಸೂದೆ- ಹಿಂದುಳಿದ ವರ್ಗಗಳನ್ನು ನೋಟಿಫೈ ಮಾಡುವುದಕ್ಕೆ ರಾಜ್ಯ ಸರ್ಕಾರಗಳಿಗೆ ಸಂಪೂರ್ಣ ಅಧಿಕಾರ ನೀಡುವ ಮಸೂದೆ ಅಂಗೀಕಾರವನ್ನು ಬೆಂಬಲಿಸುವುದಾಗಿ ವಿಪಕ್ಷಗಳು ಘೋಷಿಸಿವೆ. 

ರಾಜ್ಯಸಭೆ-ಲೋಕಸಭೆಗಳಲ್ಲಿನ ವಿಪಕ್ಷ ನಾಯಕರ ಸಭೆಯ ನಂತರ ಮಾತನಾಡಿರುವ ರಾಜ್ಯಸಭೆಯ ವಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ, ಸಂವಿಧಾನಕ್ಕೆ 127 ನೇ ತಿದ್ದುಪಡಿ ತರುವ ಮಸೂದೆಯನ್ನು ಎಲ್ಲಾ ವಿಪಕ್ಷಗಳೂ ಬೆಂಬಲಿಸಲಿವೆ ಎಂದು ತಿಳಿಸಿದ್ದಾರೆ. 

ಸಾಮಾಜಿಕ- ಆರ್ಥಿಕವಾಗಿ ಹಿಂದುಳಿದ ವರ್ಗಗಳನ್ನು ನೋಟಿಫೈ ಮಾಡುವುದಕ್ಕೆ ರಾಜ್ಯ ಸರ್ಕಾರಗಳಿಗೆ ಸಂಪೂರ್ಣ ಅಧಿಕಾರ ನೀಡುವ ಮಸೂದೆ ಇದಾಗಿದೆ. 

ವಿಪಕ್ಷಗಳ ಕಾರ್ಯತಂತ್ರದ ಸಭೆಯಲ್ಲಿ ಈ ಮಸೂದೆಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರವನ್ನು ಬೆಂಬಲಿಸುವ ಬಗ್ಗೆ ಚರ್ಚೆ ನಡೆಸಲಾಗಿದೆ. ಈ ತಿದ್ದುಪಡಿಯಿಂದ ರಾಜ್ಯಳಿಗೆ ಸಾಮಾಜಿಕ- ಆರ್ಥಿಕವಾಗಿ ಹಿಂದುಳಿದ ವರ್ಗಗಳನ್ನು ನೋಟಿಫೈ ಮಾಡುವುದಕ್ಕೆ ಅಧಿಕಾರ ಮರಳಿ ಸಿಗಲಿದೆ. ಈ ಅಧಿಕಾರವನ್ನು ಕೇಂದ್ರಕ್ಕೆ ಮಾತ್ರ ಸೀಮಿತಗೊಳಿಸಿ 2021 ರ ಮೇ ತಿಂಗಳಲ್ಲಿ ಸುಪ್ರೀಂ ಕೋರ್ಟ್ ಆದೇಶ ನೀಡಿತ್ತು. 

"ದೇಶದಲ್ಲಿ ಅರ್ಧದಷ್ಟು ಜನಸಂಖ್ಯೆ ಹಿಂದುಳಿದ ವರ್ಗಕ್ಕೆ ಸೇರಿದ್ದಾಗಿದೆ. ಮಸೂದೆ ಮಂಡನೆ ಮಾಡಿದ ದಿನವೇ ಅಂಗೀಕರಿಸಲಾಗುತ್ತದೆ" ಎಂದು ಖರ್ಗೆ ಹೇಳಿದ್ದಾರೆ. ಸಂಸತ್ ನ ಮುಂಗಾರು ಅಧಿವೇಶನ ಕೊನೆಯ ವಾರಕ್ಕೆ ಬಂದಿದ್ದು, ಪೆಗಾಸಸ್ ಕುರಿತ ಚರ್ಚೆ ಹಾಗೂ ರೈತರ ಪ್ರತಿಭಟನೆಗಳ ವಿಷಯವಾಗಿ ಕೇಂದ್ರ ಸರ್ಕಾರವನ್ನು ಹಣಿಯುವುದಕ್ಕೆ ಕಾರ್ಯತಂತ್ರ ರೂಪಿಸಲು ವಿಪಕ್ಷಗಳು ಆ.09 ರಂದು ಸಭೆ ನಡೆಸಿದ್ದವು. 

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸಹ ಈ ಸಭೆಯಲ್ಲಿ ಭಾಗಿಯಾಗಿದ್ದರು. ಡಿಎಂಕೆ, ಟಿಎಂಸಿ, ಎನ್ ಸಿಪಿ, ಎಸ್ ಪಿ, ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾರ್ಕ್ಸಿಸ್ಟ್) ಆರ್ ಜೆಡಿ, ಆಮ್ ಆದ್ಮಿ ಪಕ್ಷದ ನಾಯಕರು ಸಭೆಯಲ್ಲಿ ಭಾಗಿಯಾಗಿದ್ದರು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com