ಬೇಲ್ ಮೇಲೆ ಹೊರಬಂದಿದ್ದ ವ್ಯಕ್ತಿಯಿಂದ ಪತ್ನಿಯ ಕೊಲೆ: ಮೂವರು ಅಧಿಕಾರಿಗಳು ಅಮಾನತು
ನವದೆಹಲಿ: ಬೇಲ್ ಮೇಲೆ ಹೊರಬಂದಿದ್ದ ವ್ಯಕ್ತಿಯೋರ್ವ ಪೊಲೀಸ್ ರಕ್ಷಣೆಯಲ್ಲಿದ್ದ ಪತ್ನಿಯನ್ನು ಪತ್ನಿ ಕೊಲೆ ಮಾಡಿರುವ ಘಟನೆಗೆ ಸಂಬಂಧಿಸಿದಂತೆ ಮೂವರು ಪೊಲೀಸ್ ಅಧಿಕಾರಿಗಳನ್ನು ಅಮಾನತು ಮಾಡಿರುವುದಾಗಿ ದೆಹಲಿ ಪೊಲೀಸ್ ಇಲಾಖೆ ನ್ಯಾಯಾಲಯಕ್ಕೆ ತಿಳಿಸಿದೆ.
ಅಮಾನತುಗೊಂಡ ಅಧಿಕಾರಿಗಳು ನಗರದ ಗೋವಿಂದ್ಪುರಿ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. ಅವರ ವಿರುದ್ಧ ವಿಭಾಗೀಯ ತನಿಖೆಗೆ ಆದೇಶ ಹೊರಡಿಸಲಾಗಿದೆ ಎಂಡು ತಿಳಿದುಬಂದಿದೆ.
ಆರೋಪಿ ನಂದಾ ನಾಯಕ್ ಎಂಬಾತನ ವಿರುದ್ಧ ದಾಖಲಾಗಿದ್ದ ಪ್ರಕರಣದಲ್ಲಿ ಆತನ ಪತ್ನಿಯೇ ಪ್ರಮುಖ ಸಾಕ್ಷಿಯಾಗಿದ್ದಳು. ಆತ ಜೂನ್ ತಿಂಗಳಲ್ಲಿ ಬೇಲ್ ಪಡೆದು ಹೊರ ಬಂದಿದ್ದ. ಹೊರಬಂದವನು ತನ್ನ ವಿರುದ್ಧ ದಾಖಲಾಗಿದ್ದ ಪ್ರಕರಣವನ್ನು ಹಿಂಪಡೆಯುವಂತೆ ಪತ್ನಿಯ ಮೇಲೆ ಒತ್ತಡ ಹಾಕಿದ್ದ. ಇದನ್ನು ಆಕೆ ನ್ಯಾಯಾಲಯದ ಗಮನಕ್ಕೆ ತಂದಿದ್ದಳು.
ನ್ಯಾಯಾಲಯ ಆತನ ಬೇಲ್ ರದ್ದುಗೊಳಿಸಿ ಇನ್ನೆರಡು ದಿನಗಳಲ್ಲಿ ಪೊಲೀಸರಿಗೆ ಶರಣಾಗಲು ಸೂಚಿತ್ತು. ಅಲ್ಲದೆ ಆತನ ಪತ್ನಿ ಜಾರ್ನಾಗೆ ರಕ್ಷಣೆ ಒದಗಿಸುವಂತೆ ಆದೇಶ ಹೊರಡಿಸಿತ್ತು. ಅಷ್ಟರೊಳಗೆ ಆರೋಪಿ ಪತ್ನಿಯ ಸೆರಗಿನಿಂದಲೇ ಆಕೆಯ ಕುತ್ತಿಗೆ ಬಿಗಿದು ಉಸಿರುಗಟ್ಟಿಸಿ ಸಾಯಿಸಿದ್ದ.
Follow KannadaPrabha channel on WhatsApp
KannadaPrabha News app ಡೌನ್ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ