ತೇಜ ಪ್ರತಾಪ್ ಮತ್ತು ತೇಜಸ್ವಿ ಯಾದವ್
ತೇಜ ಪ್ರತಾಪ್ ಮತ್ತು ತೇಜಸ್ವಿ ಯಾದವ್

ಹಿರಿಯರಿಗೆ ಗೌರವ ಕೊಡಿ: ಅಣ್ಣ ತೇಜ್ ಪ್ರತಾಪ್ ಗೆ ಆರ್‌ಜೆಡಿ ನಾಯಕ ತೇಜಸ್ವಿ ಯಾದವ್ ಬುದ್ಧಿವಾದ!

ಹಿರಿಯರಿಗೆ ಗೌರವ ಕೊಡಬೇಕು ತೇಜ್‌ ಪ್ರತಾಪ್‌ ಯಾದವ್‌ ಶಿಸ್ತಿನಿಂದ ವರ್ತಿಸಬೇಕು ಎಂದು ರಾಷ್ಟ್ರೀಯ ಜನತಾದಳದ (ಆರ್‌ಜೆಡಿ) ನಾಯಕ ತೇಜಸ್ವಿ ಯಾದವ್ ಅಣ್ಣನಿಗೆ ಕಿವಿಮಾತು ಹೇಳಿದ್ದಾರೆ. 

ಪಾಟ್ನಾ: ಹಿರಿಯರಿಗೆ ಗೌರವ ಕೊಡಬೇಕು ತೇಜ್‌ ಪ್ರತಾಪ್‌ ಯಾದವ್‌ ಶಿಸ್ತಿನಿಂದ ವರ್ತಿಸಬೇಕು ಎಂದು ರಾಷ್ಟ್ರೀಯ ಜನತಾದಳದ (ಆರ್‌ಜೆಡಿ) ನಾಯಕ ತೇಜಸ್ವಿ ಯಾದವ್ ಅಣ್ಣನಿಗೆ ಕಿವಿಮಾತು ಹೇಳಿದ್ದಾರೆ. 

ನಮ್ಮದು ಶಿಸ್ತಿನ ಕುಟುಂಬ, ನಮ್ಮ ತಂದೆ ತಾಯಿ ಒಳ್ಳೆಯ ಸಂಸ್ಕೃತಿ ಮತ್ತು ಉತ್ತಮ ನಡವಳಿಕೆಯನ್ನು ಕಲಿಸಿಕೊಟ್ಟಿದ್ದಾರೆ, ತೇಜ್‌ ಪ್ರತಾಪ್‌ ಉತ್ತಮ ನಡವಳಿಕೆಯನ್ನು ರೂಢಿಸಿಕೊಳ್ಳಬೇಕು ಎಂದು ಹೇಳಿದ್ದಾರೆ.

ತೇಜ್‌ ಪ್ರತಾಪ್‌ ವರ್ತನೆ ಬಗ್ಗೆ ತಂದೆ ಲಾಲು ಪ್ರಸಾದ್‌ ಯಾದವ್‌ ಹಾಗೂ ತಾಯಿ ರಾಬ್ಡಿ ದೇವಿ ಬೇಸರ ವ್ಯಕ್ತಪಡಿಸಿದ್ದಾರೆ ಎಂದು ತೇಜಸ್ವಿ ಯಾದವ್‌ ಹೇಳಿದ್ದಾರೆ. ಇತ್ತೀಚೆಗೆ ತೇಜ್ ಪ್ರತಾಪ್‌ ರಾಷ್ಟ್ರೀಯ ಜನತಾ ದಳದ ಹಿರಿಯ ನಾಯಕ ಜಗದಾನಂದ ಸಿಂಗ್‌ ಅವರ ಜತೆ ಅನುಚಿತವಾಗಿ ವರ್ತಸಿದ್ದರು. ಅಣ್ಣನ ನಡೆಯ ಬಗ್ಗೆ ತೇಜಸ್ವಿ ಯಾದವ್‌ ಕೂಡ ಬೇಸರ ವ್ಯಕ್ತಪಡಿಸಿದ್ದರು.

Related Stories

No stories found.

Advertisement

X
Kannada Prabha
www.kannadaprabha.com