ಬಿಜೆಪಿ ಅಡಿಯಲ್ಲಿ ರಾಷ್ಟ್ರದ ಆಸ್ತಿಗಳು ಸುರಕ್ಷಿತವಾಗಿಲ್ಲ: ಎನ್ ಎಂಪಿ ಗೆ ಕಾಂಗ್ರೆಸ್ ಟೀಕೆ

ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ‘ರಾಷ್ಟ್ರೀಯ ನಗದೀಕರಣ ಯೋಜನೆ’ ಘೋಷಿಸಿದ ಬೆನ್ನಲ್ಲೇ ಕಾಂಗ್ರೆಸ್ ಬಿಜೆಪಿ ವಿರುದ್ಧ ದೇಶದ ಸ್ವತ್ತುಗಳನ್ನು ಮಾರಾಟ ಮಾಡುತ್ತಿರುವ ಆರೋಪ ಮಾಡಿದೆ.
ರಣದೀಪ್ ಸುರ್ಜೆವಾಲಾ
ರಣದೀಪ್ ಸುರ್ಜೆವಾಲಾ
Updated on

ನವದೆಹಲಿ: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ‘ರಾಷ್ಟ್ರೀಯ ನಗದೀಕರಣ ಯೋಜನೆ’ ಘೋಷಿಸಿದ ಬೆನ್ನಲ್ಲೇ ಕಾಂಗ್ರೆಸ್ ಬಿಜೆಪಿ ವಿರುದ್ಧ ದೇಶದ ಸ್ವತ್ತುಗಳನ್ನು ಮಾರಾಟ ಮಾಡುತ್ತಿರುವ ಆರೋಪ ಮಾಡಿದೆ.

ರಣ್ದೀಪ್ ಸುರ್ಜೆವಾಲ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದು,  ಬಿಜೆಪಿ ಆಡಳಿತಾವಧಿಯಲ್ಲಿ ದೇಶದ ಆಸ್ತಿಗಳು ಸುರಕ್ಷಿತವಾಗಿಲ್ಲ, ಬಿಜೆಪಿ ಅದನ್ನು ಉಳಿಸುವುದಿಲ್ಲ ಎಂದು ಆರೋಪಿಸಿದ್ದಾರೆ.

ರಸ್ತೆ, ರೈಲ್ವೆ, ಗಣಿಗಾರಿಕೆ, ಟೆಲಿಕಾಮ್, ವಿದ್ಯುತ್, ಅನಿಲ, ವಿಮಾನ ನಿಲ್ದಾಣ, ಬಂದರು, ಕ್ರೀಡಾ ಸ್ಟೇಡಿಯಂ ಹೀಗೆ ಭೂಮಿಯಿಂದ ಆಕಾಶದ ವರೆಗೆ ಪ್ರಧಾನಿ ಮೋದಿ ಎಲ್ಲವನ್ನೂ ಮಾರಾಟ ಮಾಡಲಿದ್ದಾರೆ ಎಂದು ರಣ್ದೀಪ್ ಸುರ್ಜೆವಾಲ ಆರೋಪಿಸಿದ್ದಾರೆ.

#StopSellingIndia ಎಂಬ ಹ್ಯಾಷ್ ಟ್ಯಾಗ್ ನ ಅಡಿಯಲ್ಲಿ ಟ್ವೀಟ್ ಮಾಡಿರುವ ಸುರ್ಜೆವಾಲ, ಬಿಜೆಪಿ ಇದ್ದಲ್ಲಿ ದೇಶದ ಆಸ್ತಿಗಳಿಗೆ ಉಳಿಗಾಲವಿಲ್ಲ ಎಂದು ಬರೆದಿದ್ದಾರೆ.
     
6 ಲಕ್ಷ ಕೋಟಿ ರೂಪಾಯಿ ಮೌಲ್ಯದ ಮೂಲಸೌಕರ್ಯಗಳ ಪಟ್ಟಿಯನ್ನು ಕೇಂದ್ರ ಸರ್ಕಾರ ಅಂತಿಮಗೊಳಿಸಿದ್ದು. ಈ ಪಟ್ಟಿಯಲ್ಲಿ ಪ್ರಮುಖವಾಗಿ ರಸ್ತೆಗಳು, ರೈಲ್ವೆ ಹಾಗೂ ವಿದ್ಯುತ್ ಗ್ರಿಡ್‌ಗಳೂ ಸೇರಿವೆ. ಆದರೆ ಭೂಮಿ ಮಾರಾಟ ಈ ಪಟ್ಟಿಯಲ್ಲಿ ಸೇರಿಲ್ಲ ಎಂದು ನಿರ್ಮಲಾ ಸೀತಾರಾಮನ್ ಅವರು ಹೇಳಿದ್ದಾರೆ.

ಚೆನ್ನೈ, ಭೋಪಾಲ್, ವಾರಾಣಸಿ, ವಡೋದರ ಸೇರಿ 25 ಏರ್ಪೋರ್ಟ್ಸ್ ಅಥಾರಿಟಿ ಆಫ್ ಇಂಡಿಯಾ (ಎಎಐ), 40 ರೈಲ್ವೆ ನಿಲ್ದಾಣಗಳು, 15 ರೈಲ್ವೆ ಸ್ಟೇಡಿಯಂಗಳು ಹಾಗೂ ಇನ್ನೂ ಗುರುತಿಸದ ಸಂಖ್ಯೆಯ ರೈಲ್ವೆ ಕಾಲೋನಿಗಳನ್ನು ಖಾಸಗಿ ಹೂಡಿಕೆಗಾಗಿ ಮಾರಾಟ ಮಾಡಲಾಗುತ್ತಿದೆ.

ಭೂಮಿ ಅಥವಾ ಮಾಲಿಕತ್ವದ ವರ್ಗಾವಣೆ ಇರುವುದಿಲ್ಲ ಎಂದು ನಿರ್ಮಲಾ ಸೀತಾರಾಮನ್ ಹೇಳಿದ್ದು, ಎನ್ಎಂಪಿ ಸರ್ಕಾರದ ಬ್ರೌನ್ಫೀಲ್ಡ್ ಮೂಲಸೌಕರ್ಯ ಸ್ವತ್ತುಗಳ ನಾಲ್ಕು ವರ್ಷಗಳ ಪೈಪ್‌ಲೈನ್ ಅನ್ನು ಒಳಗೊಂಡಿದೆ ಎಂದು ಹೇಳಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com