ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್

ಆಫ್ಘಾನಿಸ್ತಾನದಲ್ಲಿನ ಹಾಲಿ ಬೆಳವಣಿಗೆಗಳಿಂದ ಹೊಸ ಭದ್ರತಾ ಆಂತಕ: ರಾಜನಾಥ್ ಸಿಂಗ್

ಆಫ್ಘಾನಿಸ್ತಾನದಲ್ಲಿನ ಹಾಲಿ ಬೆಳವಣಿಗೆಗಳಿಂದ ದೇಶಕ್ಕೆ ಹೊಸ ಭದ್ರತಾ ಆಂತಕ ಎದುರಾಗಿದೆ ಎಂದು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹೇಳಿದ್ದಾರೆ.

ನವದೆಹಲಿ: ಆಫ್ಘಾನಿಸ್ತಾನದಲ್ಲಿನ ಹಾಲಿ ಬೆಳವಣಿಗೆಗಳಿಂದ ದೇಶಕ್ಕೆ ಹೊಸ ಭದ್ರತಾ ಆಂತಕ ಎದುರಾಗಿದೆ ಎಂದು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹೇಳಿದ್ದಾರೆ.

ರಾಷ್ಟ್ರೀಯ ಭದ್ರತೆ ವಿಷಯದ ಕುರಿತು ಪಂಜಾಬ್ ವಿಶ್ವವಿದ್ಯಾಲಯ ಆಯೋಜಿಸಿದ್ದ ಮೂರನೇ ಬಲರಾಮ್ಜಿ ದಾಸ್ ಟಂಡನ್ ಸ್ಮಾರಕ ಉಪನ್ಯಾಸ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ರಾಜನಾಥ್ ಸಿಂಗ್ ಅವರು, 'ಆಫ್ಘಾನಿಸ್ತಾನದಲ್ಲಿ ಪ್ರಸ್ತುತ ನಡೆಯುತ್ತಿರುವ ಘಟನೆಗಳು ಹೊಸ ಭದ್ರತಾ ಆತಂಕ ಮತ್ತು ಪ್ರಶ್ನೆಗಳನ್ನು ಹುಟ್ಟುಹಾಕಿದೆ. ಆದರೆ ಈ ಬಗ್ಗೆ ಕೇಂದ್ರ ಸರ್ಕಾರವು ಎಚ್ಚರವಾಗಿರುತ್ತದೆ ಮತ್ತು ಯಾವುದೇ ಪರಿಸ್ಥಿತಿಯನ್ನು ನಿಭಾಯಿಸಲು ಸಮರ್ಥವಾಗಿದೆ. ಅಫ್ಘಾನಿಸ್ತಾನದ ಬೆಳವಣಿಗೆಗಳ ಲಾಭವನ್ನು ಪಡೆದುಕೊಳ್ಳುವ ಮೂಲಕ ಗಡಿಯಾಚೆಗಿನ ಭಯೋತ್ಪಾದನೆಯನ್ನು ಪ್ರೋತ್ಸಾಹಿಸಲು ಯಾವುದೇ ದೇಶವಿರೋಧಿ ಶಕ್ತಿಗೆ ಅವಕಾಶ ನೀಡಬಾರದು ಎಂದು ಹೇಳಿದರು.

ವರ್ಚುವಲ್ ಭಾಷಣದಲ್ಲಿ ಮಾತನಾಡಿದ ರಾಜನಾಥ್ ಸಿಂಗ್. 'ನೆರೆಯ ಅಫ್ಘಾನಿಸ್ತಾನದಲ್ಲಿ ಏನಾಗುತ್ತಿದೆ ಎಂಬುದು ಭದ್ರತೆಯ ವಿಷಯದಲ್ಲಿ ಹೊಸ ಪ್ರಶ್ನೆಗಳನ್ನು ಹುಟ್ಟುಹಾಕುತ್ತಿದೆ. ನಮ್ಮ ಸರ್ಕಾರ ಅಲ್ಲಿನ ಬೆಳವಣಿಗೆಗಳ ಮೇಲೆ ತೀವ್ರ ನಿಗಾ ಇಟ್ಟಿದೆ.  ಭಾರತೀಯರ ಭದ್ರತೆಯ ಜೊತೆಗೆ, ದೇಶವಿರೋಧಿ ಶಕ್ತಿಗಳು ಗಡಿಯಾಚೆಗಿನ ಭಯೋತ್ಪಾದನೆಯನ್ನು ಅಲ್ಲಿನ ಅಭಿವೃದ್ಧಿಯ ಲಾಭ ಪಡೆಯುವ ಮೂಲಕ ಪ್ರೋತ್ಸಾಹಿಸಬಾರದು ಎಂದು ನಮ್ಮ ಸರ್ಕಾರ ಬಯಸುತ್ತದೆ. ರಾಷ್ಟ್ರೀಯ ಭದ್ರತೆಯ ದೃಷ್ಟಿಕೋನದಿಂದ ಸವಾಲುಗಳಾಗುವ ಕೆಲವು ಹೆಚ್ಚಿನ ಆತಂಕಗಳಿವೆ. ಕೇಂದ್ರದಲ್ಲಿರುವ ಮೋದಿ ನೇತೃತ್ವದ ಸರ್ಕಾರವು ಯಾವುದೇ ಪರಿಸ್ಥಿತಿಯನ್ನು ನಿಭಾಯಿಸಲು ಸಮರ್ಥವಾಗಿದೆ ಎಂದು ಹೇಳಿದರು.

ಇನ್ನು ಆಗಸ್ಟ್ 15 ರಂದು ತಾಲಿಬಾನ್ ಅಫ್ಘಾನಿಸ್ತಾನದ ಮೇಲೆ ಹಿಡಿತ ಸಾಧಿಸಿತು, ಎರಡು ದಶಕಗಳ ಯುದ್ಧದ ನಂತರ ಅಮೆರಿಕ ತನ್ನ ಸೈನ್ಯವನ್ನು ಹಿಂಪಡೆಯಲು ಎರಡು ವಾರಗಳ ಮೊದಲು,  ತಾಲಿಬಾನ್ ಎಲ್ಲಾ ಪ್ರಮುಖ ನಗರಗಳನ್ನು ಕೆಲವೇ ದಿನಗಳ ಅಂತರದಲ್ಲಿ ವಶಪಡಿಸಿಕೊಂಡಿತು.
 

Related Stories

No stories found.

Advertisement

X
Kannada Prabha
www.kannadaprabha.com