ಭಾರತ ಅಫ್ಘಾನಿಸ್ತಾನಕ್ಕೆ ಗೋಧಿ, ಜೀವ ರಕ್ಷಕ ಔಷಧ ಸಾಗಿಸಲು ಪಾಕ್ ಒಪ್ಪಿಗೆ

ವಾಘಾ ಗಡಿ ಮೂಲಕ ಅಫ್ಘಾನಿಸ್ತಾನದ ಜನರಿಗೆ ಮಾನವೀಯ ನೆಲೆಯಲ್ಲಿ ಅಪ್ಘನ್ ಟ್ರಕ್ ಗಳಲ್ಲಿ  50 ಸಾವಿರ ಮೆಟ್ರಿಕ್ ಟನ್ ಗೋಧಿ ಮತ್ತು ಜೀವ ರಕ್ಷಕ ಔಷಧವನ್ನು ಭಾರತ ಸಾಗಿಸಲು ಪಾಕಿಸ್ತಾನ ಶುಕ್ರವಾರ ಒಪ್ಪಿಕೊಂಡಿದೆ. ಈ ಸಾಗಾಣಿಕೆ ವಿಚಾರವಾಗಿ ಉಭಯ ದೇಶಗಳ ನಡುವೆ ವಿವಾದ ತಲೆದೋರಿತ್ತು. 
ವಾಘಾ ಗಡಿ
ವಾಘಾ ಗಡಿ
Updated on

ನವದೆಹಲಿ: ವಾಘಾ ಗಡಿ ಮೂಲಕ ಅಫ್ಘಾನಿಸ್ತಾನದ ಜನರಿಗೆ ಮಾನವೀಯ ನೆಲೆಯಲ್ಲಿ ಅಪ್ಘನ್ ಟ್ರಕ್ ಗಳಲ್ಲಿ  50 ಸಾವಿರ ಮೆಟ್ರಿಕ್ ಟನ್ ಗೋಧಿ ಮತ್ತು ಜೀವ ರಕ್ಷಕ ಔಷಧವನ್ನು ಭಾರತ ಸಾಗಿಸಲು ಪಾಕಿಸ್ತಾನ ಶುಕ್ರವಾರ ಒಪ್ಪಿಕೊಂಡಿದೆ. ಈ ಸಾಗಾಣಿಕೆ ವಿಚಾರವಾಗಿ ಉಭಯ ದೇಶಗಳ ನಡುವೆ ವಿವಾದ ತಲೆದೋರಿತ್ತು. 

ಪಾಕ್ ನೆಲದ ಮೂಲಕ ಅಫ್ಘಾನಿಸ್ತಾನಕ್ಕೆ ಗೋಧಿ ಹಾಗೂ ಜೀವ ರಕ್ಷಕವನ್ನು ಸಾಗಿಸಲು ಮಾರ್ಗವನ್ನು ಅಂತಿಮಗೊಳಿಸಲು ಪಾಕಿಸ್ತಾನದೊಂದಿಗೆ ಚರ್ಚೆ ನಡೆಯುತ್ತಿರುವುದಾಗಿ ಗುರುವಾರ ಭಾರತ ಹೇಳಿತ್ತು. ಮಾನವೀಯತೆ ನೆಲೆಯಲ್ಲಿ ನೆರವು ನೀಡುವುದಕ್ಕೆ ಯಾವುದೇ ಷರತ್ತನ್ನು ಹಾಕಬಾರದು ಎಂದಿತ್ತು.ಮಾನವೀಯ ನೆರವಿಗೆ ಷರತ್ತು ಹಾಕಬಾರದು ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರ ಅರಿಂದಮ್ ಬಾಗ್ಚಿ ಹೇಳಿದ್ದರು. 

ಮಾನವೀಯ ಉದ್ದೇಶಗಳಿಗಾಗಿ ನೆರೆಯ ಅಫ್ಘಾನಿಸ್ತಾನಕ್ಕೆ ತನ್ನ ನೆಲದ ಮೂಲಕ ಗೋಧಿ ಹಾಗೂ ಜೀವ ರಕ್ಷಕ ಸಾಗಿಸಲು ಅವಕಾಶ ಮಾಡಿಕೊಡುವುದಾಗಿ ಪಾಕಿಸ್ತಾನ ಕಳೆದ ವಾರ ಭಾರತಕ್ಕೆ ಔಪಚಾರಿಕವಾಗಿ ತಿಳಿಸಿತ್ತು. ಆದಾಗ್ಯೂ, ಗುರುವಾರ ಉಲ್ಟಾ ಹೊಡೆದಿತ್ತು. ಇದೀಗ ಅಪ್ಘನ್ ಟ್ರಕ್ ಗಳಲ್ಲಿ ಅಪ್ಘಾನಿಸ್ತಾನದಿಂದ ಭಾರತದಿಂದ ಗೋಧಿ ಮತ್ತು ಜೀವ ರಕ್ಷಕ ಸಾಗಿಸಲು ಒಪ್ಪಿಕೊಂಡಿರುವುದಾಗಿ ಪಾಕಿಸ್ತಾನ ವಿದೇಶಾಂಗ ಇಲಾಖೆ ಶುಕ್ರವಾರ ಹೇಳಿದೆ. 

 ತ್ವರಿತಗತಿಯಲ್ಲಿ ಮಾನವೀಯ ನೆರವನ್ನು ಪೂರೈಸಲು ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳುವಂತೆ ಭಾರತ ಸರ್ಕಾರವನ್ನು ಒತ್ತಾಯಿಸಲಾಗಿದೆ ಎಂದು ಪಾಕ್ ವಿದೇಶಾಂಗ ಇಲಾಖೆ ತಿಳಿಸಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com