ಜನರಲ್ ಬಿಪಿನ್ ರಾವತ್ ಹೆಲಿಕಾಪ್ಟರ್ ಪತನದ ಬಗ್ಗೆ ವಿವಾದಾತ್ಮಕ ಟ್ವೀಟ್‌: ಯೂಟ್ಯೂಬರ್ ಮರಿದಾಸ್ ಬಂಧನ

ರಕ್ಷಣಾ ಪಡೆಗಳ ಮುಖ್ಯಸ್ಥ ಜನರಲ್ ಬಿಪಿನ್ ರಾವತ್ ಹಾಗೂ ಅವರ ಪತ್ನಿ ಸೇರಿದಂತೆ 13 ಮಂದಿ ಸಾವನ್ನಪ್ಪಿದ ಕೂನೂರ್ ಹೆಲಿಕಾಪ್ಟರ್ ಪತನದ ಬಗ್ಗೆ ವಿವಾದಾತ್ಮಕ ಟ್ವೀಟ್‌ಗೆ ಸಂಬಂಧಿಸಿದಂತೆ ಯೂಟ್ಯೂಬರ್ ಮರಿದಾಸ್ ಅವರನ್ನು...
ಯೂಟ್ಯೂಬರ್ ಮರಿದಾಸ್
ಯೂಟ್ಯೂಬರ್ ಮರಿದಾಸ್

ಮಧುರೈ: ರಕ್ಷಣಾ ಪಡೆಗಳ ಮುಖ್ಯಸ್ಥ ಜನರಲ್ ಬಿಪಿನ್ ರಾವತ್ ಹಾಗೂ ಅವರ ಪತ್ನಿ ಸೇರಿದಂತೆ 13 ಮಂದಿ ಸಾವನ್ನಪ್ಪಿದ ಕೂನೂರ್ ಹೆಲಿಕಾಪ್ಟರ್ ಪತನದ ಬಗ್ಗೆ ವಿವಾದಾತ್ಮಕ ಟ್ವೀಟ್‌ಗೆ ಸಂಬಂಧಿಸಿದಂತೆ ಯೂಟ್ಯೂಬರ್ ಮರಿದಾಸ್ ಅವರನ್ನು ತಮಿಳುನಾಡಿನ ಮಧುರೈನಲ್ಲಿ ಸೈಬರ್ ಕ್ರೈಂ ಪೊಲೀಸರು ಗುರುವಾರ ಬಂಧಿಸಿದ್ದಾರೆ.

ಡಿಎಂಕೆ ಆಡಳಿತದಲ್ಲಿ ತಮಿಳುನಾಡು ಕಾಶ್ಮೀರವಾಗಿ ಬದಲಾಗುತ್ತಿದೆಯೇ ಎಂದು ಪ್ರಶ್ನಿಸಿ ಟ್ವೀಟ್ ಮಾಡಿದ್ದ ಮರಿದಾಸ್, ನಂತರ ಅದನ್ನು ಡಿಲೀಟ್ ಮಾಡಿದ್ದರು.

ಬುಧವಾರದ ಸೇನಾ ಹೆಲಿಕಾಪ್ಟರ್ ದುರಂತದ ಹಿಂದೆ ಕಾಣದ ಕೈಗಳಿವೆ ಎಂದು ತೋರುತ್ತಿದೆ. ದೇಶಕ್ಕೆ ನಿಷ್ಠೆ ಇಲ್ಲದ ಜನರು ಒಗ್ಗೂಡಿದಾಗ ಸಂಚು ರೂಪಿಸುವ ಸಾಧ್ಯತೆಗಳಿವೆ ಮತ್ತು ಪ್ರತ್ಯೇಕತಾವಾದಿ ಶಕ್ತಿಗಳನ್ನು ತಡೆಯಬೇಕು ಎಂದು ಮರಿದಾಸ್ ಟ್ವೀಟ್ ಮಾಡಿದ್ದರು.

ವಿವಾದಾತ್ಮಕ ಟ್ವೀಟ್ ಬಳಿಕ ಮದುರೈ ಪೊಲೀಸರು ಕೆ ಪುದೂರಿನ ಸೂರ್ಯ ನಗರದಲ್ಲಿರುವ ಮರಿದಾಸ್ ಅವರ ಮನೆಗೆ ತೆರಳಿ ವಿಚಾರಣೆ ನಡೆಸಿದರು. ಈ ವೇಳೆ ಬಿಜೆಪಿ ಸದಸ್ಯರು ಸ್ಥಳದಲ್ಲಿ ಜಮಾಯಿಸಿ, ಅವರನ್ನು ಬಂಧಿಸದಂತೆ ಒತ್ತಾಯಿಸಿದರು. ಆದರೆ ಪೊಲೀಸರು ಸ್ವಲ್ಪ ಕಷ್ಟಪಟ್ಟು ಕೆ ಪುದೂರು ಠಾಣೆಗೆ ಕರೆದೊಯ್ದರು, ಅಲ್ಲಿ ಮತ್ತೆ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. 

ಜಿಲ್ಲಾಧಿಕಾರಿಗಳಾದ ಟಿ.ಕೆ.ರಾಜಶೇಖರನ್ ಮತ್ತು ತಂಗದುರೈ ಅವರು ಸ್ಥಳದಲ್ಲಿಯೇ ಇದ್ದು ಪರಿಸ್ಥಿತಿಯನ್ನು ನಿಯಂತ್ರಿಸಿದರು. ಮರಿದಾಸ್ ವಿರುದ್ಧ ಸೈಬರ್ ಕ್ರೈಂ ಪೊಲೀಸರು ಐಪಿಸಿ ಸೆಕ್ಷನ್ 153 (ಎ), 504, 505 (ii), 505 (i) (ಬಿ) ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com