ಟಿಕ್ರಿ ಪ್ರತಿಭಟನಾ ಸ್ಥಳದಿಂದ ಮನೆಗೆ ಹಿಂತಿರುಗುತ್ತಿದ್ದಾಗ ಅಪಘಾತ: ಇಬ್ಬರು ರೈತರು ದುರ್ಮರಣ

ದೆಹಲಿಯ ಟಿಕ್ರಿ ಗಡಿ ಬಳಿಯ ಪ್ರತಿಭಟನಾ ಸ್ಥಳದಿಂದ ಮನೆಗೆ ಹಿಂತಿರುಗುತ್ತಿದ್ದಾಗ ಟ್ರಕ್ ವೊಂದು ಟ್ರ್ಯಾಕ್ಟರ್ ಟ್ರೈಲರ್ ಡಿಕ್ಕಿ ಹೊಡೆದ ಪರಿಣಾಮ ಪಂಜಾಬಿನ ಇಬ್ಬರು ರೈತರು ಮೃತಪಟ್ಟಿರುವ ಘಟನೆ ಶನಿವಾರ ನಡೆದಿದೆ.
ಅಪಘಾತದ ಚಿತ್ರ
ಅಪಘಾತದ ಚಿತ್ರ
Updated on

ಹಿಸಾರ್:  ದೆಹಲಿಯ ಟಿಕ್ರಿ ಗಡಿ ಬಳಿಯ ಪ್ರತಿಭಟನಾ ಸ್ಥಳದಿಂದ ಮನೆಗೆ ಹಿಂತಿರುಗುತ್ತಿದ್ದಾಗ ಟ್ರಕ್ ವೊಂದು ಟ್ರ್ಯಾಕ್ಟರ್ ಟ್ರೈಲರ್ ಡಿಕ್ಕಿ ಹೊಡೆದ ಪರಿಣಾಮ ಪಂಜಾಬಿನ ಇಬ್ಬರು ರೈತರು ಮೃತಪಟ್ಟಿರುವ ಘಟನೆ ಶನಿವಾರ ನಡೆದಿದೆ. ಹಿಸಾರ್ ನ ದಾಂದೂರ್ ಗ್ರಾಮದಲ್ಲಿ ಸಂಭವಿಸಿದ ಅಪಘಾತದಲ್ಲಿ ಓರ್ವ ರೈತ ತೀವ್ರವಾಗಿ ಗಾಯಗೊಂಡಿರುವುದಾಗಿ ಪೊಲೀಸರು ಹೇಳಿದ್ದಾರೆ.

ಈ ರೈತರು ಪಂಜಾಬಿನ ಮುಕ್ತಾಸರ್ ಜಿಲ್ಲೆಯವರಾಗಿದ್ದು, ಕೇಂದ್ರ ಸರ್ಕಾರದ ಕೃಷಿ ಕಾನೂನುಗಳ ವಿರುದ್ಧ ವರ್ಷವಿಡೀ ಪ್ರತಿಭಟನೆ ನಡೆಸಿ, ಕೊನೆಗೆ ವಿವಾದಾತ್ಮಾಕ ಕಾನೂನು ರದ್ದಾಗಿ ಮನೆಗೆ ಸಂತೋಷದಿಂದ ಹಿಂತಿರುಗುತ್ತಿದ್ದಾಗ  ಅಪಘಾತ ಸಂಭವಿಸಿದೆ. 

ಅಪಘಾತ ಸಂಭವಿಸಿದಾಗ ಟ್ರ್ಯಾಕ್ಟರ್ ಟ್ರೈಲರ್ ನಲ್ಲಿ ಐವರು ರೈತರು ಇದಿದ್ದಾಗಿ ಹಿಸಾರ್ ಪೊಲೀಸ್ ಇನ್ಸ್ ಪೆಕ್ಟರ್ ಕಪ್ತಾನ್ ಪಿಟಿಐ ಸುದ್ದಿಸಂಸ್ಥೆಗೆ ತಿಳಿಸಿದ್ದಾರೆ. ಐವರು ರೈತರ ಪೈಕಿ ಓರ್ವ ರೈತ ಸ್ಥಳದಲ್ಲಿಯೇ ಮೃತಪಟ್ಟರೆ, ಮತ್ತೋರ್ವ ರೈತ ಆಸ್ಪತ್ರೆಗೆ ಚಿಕಿತ್ಸೆಗೆ ಸಾಗಿಸುವ ವೇಳೆಯಲ್ಲಿ ಮೃತಪಟ್ಟಿರುವುದಾಗಿ ಇನ್ಸ್ ಪೆಕ್ಟರ್ ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com