ಎಂಜಿನ್ ದೋಷದಿಂದ ಮಾಡಿದ ಸ್ಪೈಸ್ ಜೆಟ್ ವಿಮಾನ ತುರ್ತು ಭೂಸ್ಪರ್ಶ: ತನಿಖೆಗೆ ಆದೇಶಿಸಿದ ಡಿಜಿಸಿಎ

ಎರಡೂವರೆ ವರ್ಷಗಳ ಕಾಲ ಸ್ಥಗಿತಗೊಂಡಿದ್ದ ವಿಮಾನಯಾನ ಕ್ಷೇತ್ರ ಸಹಜ ಸ್ಥಿತಿಗೆ ಮರಳುತ್ತಿರುವ ಸಮಯದಲ್ಲೇ ಈ ಪ್ರಕರಣ ನಡೆದಿರುವುದು ಆತಂಕಕ್ಕೆ ಕಾರಣವಾಗಿತ್ತು.  
ವಿಮ್ಯಾಕ್ಸ್ ಸ್ಪೈಸ್ ಜೆಟ್ ವಿಮಾನ
ವಿಮ್ಯಾಕ್ಸ್ ಸ್ಪೈಸ್ ಜೆಟ್ ವಿಮಾನ
Updated on

ನವದೆಹಲಿ: ನಾಗರಿಕ ವಿಮಾನಯಾನ ನಿಯಂತ್ರಕ ನಿರ್ದೇಶನಾಲಯ (ಡಿಜಿಸಿಎ) ತುರ್ತು ಭೂಸ್ಪರ್ಶ ಮಾಡಿದ ಸ್ಪೈಸ್ ಜೆಟ್ ವಿಮಾನಯಾನ ಸಂಸ್ಥೆಗೆ ಸೇರಿದ ವಿಮಾನ ಪ್ರಕರಣದ ತನಿಖೆಗೆ ಆದೇಶ ನೀಡಿದೆ. 

ಗುರುವಾರ ಸ್ಪೈಸ್ ಜೆಟ್ ನ ವಿಮಾನ ಮುಂಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶ ಮಾಡಿತ್ತು. ಬೋಯಿಂಗ್ ಸಂಸ್ಥೆಯ ವಿಮ್ಯಾಕ್ಸ್ ಎನ್ನುವ ಸರಣಿಗೆ ಸೇರಿದ ಈ ವಿಮಾನದ ಎಂಜಿನ್ ನಲ್ಲಿ ದೋಷ ಕಾಣಿಸಿಕೊಂಡಿತ್ತು. 

ಕೊರೊನಾ ಹಿನ್ನೆಲೆಯಲ್ಲಿ ಎರಡೂವರೆ ವರ್ಷಗಳ ಕಾಲ ಸ್ಥಗಿತಗೊಂಡಿದ್ದ ವಿಮಾನಯಾನ ಕ್ಷೇತ್ರ ಸಹಜ ಸ್ಥಿತಿಗೆ ಮರಳುತ್ತಿರುವ ಸಮಯದಲ್ಲೇ ಈ ಪ್ರಕರಣ ನಡೆದಿರುವುದು ಆತಂಕಕ್ಕೆ ಕಾರಣವಾಗಿದೆ.  

ವಿವಾದಕ್ಕೆ ಕಾರಣವಾಗಿರುವ ವಿಮ್ಯಾಕ್ಸ್ ಸರಣಿಯ ವಿಮಾನ ಶೇ.20 ರಷ್ಟು ಇಂಧನ ಉಳಿಸುತ್ತದೆ ಎಂದು ಸ್ಪೈಸ್ ಜೆಟ್ ಈ ಹಿಂದೆ ಹೇಳಿಕೊಂಡಿತ್ತು. ಈ ವಿಮಾನ ಸರಣಿಯಿಂದಾಗಿ ದೇಶೀಯ ವಿಮಾನಯಾನ ಕ್ಷೇತ್ರದಲ್ಲಿ ಕ್ರಾಂತಿ ಉಂಟಾಗುವುದಾಗಿ ಸಂಸ್ಥೆ ಅಭಿಪ್ರಾಯಪಟ್ಟಿತ್ತು. 

ಇದೀಗ ಪ್ರಕರಣದ ತನಿಖೆಗೆ ಆದೇಶ ನೀಡಿರುವ ಡಿಜಿಸಿಎ ವಿಮಾನ ನಿರ್ಮಾತೃ ಸಂಸ್ಥೆ ಬೋಯಿಂಗ್ ಮತ್ತು ಎಂಜಿನ್ ತಯಾರಕ ಸಂಸ್ಥೆಯನ್ನೂ ವಿಚಾರಣೆಯಲ್ಲಿ ಪಾಲ್ಗೊಳ್ಳುವಂತೆ ನಿರ್ದೇಶನ ನೀಡಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com