ಚಲಿಸುತ್ತಿದ್ದ ಬಸ್ ನಲ್ಲಿ ಹಠಾತ್ ಬೆಂಕಿ: ಪ್ರಯಾಣಿಕರು ಕೂದಲೆಳೆ ಅಂತರದಿಂದ ಪ್ರಾಣಾಪಾಯದಿಂದ ಪಾರು

 ಆಂಧ್ರಪ್ರದೇಶದ ಪ್ರಕಾಶಂ ಜಿಲ್ಲೆಯಲ್ಲಿ ಚಲಿಸುತ್ತಿದ್ದ ಬಸ್ಸಿನಲ್ಲಿ ಇದ್ದಕ್ಕಿಂತೆ ಬೆಂಕಿ ಕಾಣಿಸಿಕೊಂಡಿದ್ದು, ಪ್ರಯಾಣಿಕರು ಕೂದಲೆಳೆ ಅಂತರದಿಂದ ಪ್ರಾಣಾಪಾಯದಿಂದ ಪಾರಾದ ಘಟನೆ ನಡೆದಿದೆ.
ಬೆಂಕಿಯಿಂದ ಸುಟ್ಟು ಕರಕಲಾದ ಬಸ್
ಬೆಂಕಿಯಿಂದ ಸುಟ್ಟು ಕರಕಲಾದ ಬಸ್
Updated on

ಆಂಧ್ರ ಪ್ರದೇಶ: ಆಂಧ್ರಪ್ರದೇಶದ ಪ್ರಕಾಶಂ ಜಿಲ್ಲೆಯಲ್ಲಿ ಚಲಿಸುತ್ತಿದ್ದ ಬಸ್ಸಿನಲ್ಲಿ ಇದ್ದಕ್ಕಿಂತೆ ಬೆಂಕಿ ಕಾಣಿಸಿಕೊಂಡಿದ್ದು, ಪ್ರಯಾಣಿಕರು ಕೂದಲೆಳೆ ಅಂತರದಿಂದ ಪ್ರಾಣಾಪಾಯದಿಂದ ಪಾರಾದ ಘಟನೆ ನಡೆದಿದೆ.

ತಿಮ್ಮ ರಾಜಪಾಲೆಂ ಬಳಿ ಖಾಸಗಿ ಟೂರಿಸ್ಟ್ ಬಸ್ ವೊಂದರಲ್ಲಿ ಇಂದು ಬೆಳಗ್ಗೆ ಈ ಘಟನೆ ನಡೆದಿದ್ದು, ಬಸ್ ಸುಟ್ಟು ಕರಕಲಾಗಿದೆ. ಬಸ್ಸಿನಲ್ಲಿದ್ದ ಯಾವುದೇ ಪ್ರಯಾಣಿಕರು ಗಾಯಗೊಂಡಿಲ್ಲ.

ಹೈದರಾಬಾದಿನಿಂದ ಪ್ರಕಾಶಂ ಜಿಲ್ಲೆಯ ಚಿರಾಲ ಕಡೆಗೆ ಬರುತ್ತಿದ್ದ ವೊಲ್ವೊ ಬಸ್ ನಲ್ಲಿ 30  ಪ್ರಯಾಣಿಕರಿದ್ದರು ಎನ್ನಲಾಗಿದೆ. ಚಾಲಕನ ಸಮಯ ಪ್ರಜ್ಞೆಯಿಂದ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿರುವುದಾಗಿ ತಿಳಿದುಬಂದಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com