ಪೆಗಾಸಸ್ ಬೇಹುಗಾರಿಕೆ ಆರೋಪದ ತನಿಖೆಗೆ ಸುಪ್ರೀಂ ಕೋರ್ಟ್ ತಡೆ

ಪಶ್ಚಿಮ ಬಂಗಾಳ ಸರ್ಕಾರ ರಚಿಸಿದ್ದ ಆಯೋಗದ ಪೆಗಾಸಸ್ ಬೇಹುಗಾರಿಕೆ ಆರೋಪದ ತನಿಖೆಗೆ ಸುಪ್ರೀಂ ಕೋರ್ಟ್ ತಡೆ ನೀಡಿದೆ.
ಸುಪ್ರೀಂ ಕೋರ್ಟ್
ಸುಪ್ರೀಂ ಕೋರ್ಟ್
Updated on

ನವದೆಹಲಿ: ಪಶ್ಚಿಮ ಬಂಗಾಳ ಸರ್ಕಾರ ರಚಿಸಿದ್ದ ಆಯೋಗದ ಪೆಗಾಸಸ್ ಬೇಹುಗಾರಿಕೆ ಆರೋಪದ ತನಿಖೆಗೆ ಸುಪ್ರೀಂ ಕೋರ್ಟ್ ತಡೆ ನೀಡಿದೆ.

ಪೆಗಾಸಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳದ ಮಮತಾ ಸರ್ಕಾರ ಮಾಜಿ ಎಸ್‌ಸಿ ನ್ಯಾಯಮೂರ್ತಿ ಎಂ.ಬಿ ಲೋಕೂರ್ ಅಧ್ಯಕ್ಷತೆಯಲ್ಲಿ 2 ಸದಸ್ಯರ ಆಯೋಗವನ್ನು ರಚಿಸಿತ್ತು. ಈ ಸಂಬಂಧ ಡಿ.17 ರಂದು ನಡೆದ ವಿಚಾರಣೆ ವೇಳೆ ಸುಪ್ರೀಂ ಕೋರ್ಟ್ ತನಿಖಾ ಸಮಿತಿಗೆ ತಡೆ ನೀಡಿದೆ. ಗ್ಲೋಬಲ್ ವಿಲೇಜ್ ಫೌಂಡೇಶನ್ (ಎನ್‌ಜಿಒ) ಸಲ್ಲಿಸಿರುವ ಅರ್ಜಿಯ ಕುರಿತು ಪ್ರತಿಕ್ರಿಯೆ ನೀಡುವಂತೆ ಸುಪ್ರೀಂ ಕೋರ್ಟ್ ಆಯೋಗಕ್ಕೆ ನೋಟಿಸ್ ಜಾರಿ ಮಾಡಿದೆ. ಆಯೋಗವನ್ನು ಸ್ಥಾಪಿಸಿದ ಪಶ್ಚಿಮ ಬಂಗಾಳ ಸರ್ಕಾರವನ್ನು ಅರ್ಜಿಯಲ್ಲಿ ಪ್ರಶ್ನಿಸಲಾಗಿದೆ.

ಆಯೋಗವು ಶಾಸನಬದ್ಧ ಸಂಸ್ಥೆಯಾಗಿದ್ದು, ಸರ್ಕಾರವು ಅದಕ್ಕೆ ಆದೇಶಗಳನ್ನು ನೀಡಲು ಸಾಧ್ಯವಿಲ್ಲ ಎಂದು ನ್ಯಾಯಾಲಯ ವಿವರಿಸಿದೆ. ನ್ಯಾಯಮೂರ್ತಿ ಲೋಕೂರ್ ಆಯೋಗದ ವಿಚಾರಣೆ ಪ್ರಕ್ರಿಯೆಗೆ ಸುಪ್ರೀಂ ಕೋರ್ಟ್ ತಡೆ ನೀಡಿದ್ದರಿಂದ ಪಶ್ಚಿಮ ಬಂಗಾಳ ಸರ್ಕಾರವು ಸ್ಥಾಪಿಸಿದ ನ್ಯಾಯಮೂರ್ತಿ ಲೋಕೂರ್ ಆಯೋಗವು ಪೆಗಾಸಸ್ ಪ್ರಕರಣವನ್ನು ನಡೆಸುವುದಿಲ್ಲ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com