ಮುಸ್ಲಿಮರ ವಿರುದ್ಧ ಪ್ರಚೋದನಕಾರಿ ಭಾಷಣ: ಭಾರತೀಯ ರಾಜತಾಂತ್ರಿಕನಿಗೆ ಇಮ್ರಾನ್ ಖಾನ್ ಸರ್ಕಾರ ಸಮನ್ಸ್

ಈ ಹಿಂದೆ ಕಾಂಗ್ರೆಸ್, ಟಿಎಂಸಿ ಸೇರಿದಂತೆ ಹಲವು ರಾಜಕೀಯ ಪಕ್ಷಗಳು ಹರಿದ್ವಾರದ ಧರ್ಮ ಸಂಸದ್ ಅಧಿವೇಶನ ಕುರಿತಾಗಿ ವಿರೋಧ ವ್ಯಕ್ತಪಡಿಸಿದ್ದವು.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on

ಇಸ್ಲಾಮಾಬಾದ್: ಹರಿದ್ವಾರದಲ್ಲಿ ನಡೆದ ಧರ್ಮ ಸಂಸದ್ ಕಾರ್ಯಕ್ರಮದಲ್ಲಿ ಮುಸ್ಲಿಮರ ವಿರುದ್ಧ ಪ್ರಚೋದನಕಾರಿ ಭಾಷಣಗಳು ಮಾಡಲ್ಪಟ್ಟಿರುವುದಾಗಿ ಆರೋಪಿಸಿರುವ ಪಾಕಿಸ್ತಾನ ಈ ಸಂಬಂಧ ಇಸ್ಲಾಮಾಬಾದಿನ ಭಾರತೀಯ ರಾಜತಾಂತ್ರಿಕ ಅಧಿಕಾರಿಗೆ ಸಮನ್ಸ್ ಜಾರಿ ಮಾಡಿದೆ.

ಧರ್ಮ ಸಂಸದ್ ಅಧಿವೇಶನದಲ್ಲಿ ಅಲ್ಪಸಂಖ್ಯಾತರನ್ನು ಕೊಲ್ಲಬೇಕು ಎನ್ನುವ ಅರ್ಥದಲ್ಲಿ ಭಾಷಣಗಳನ್ನು ನೀಡಲಾಗಿದ್ದು, ಭಾರತ ಸರ್ಕಾರ ಈ ಬಗ್ಗೆ ಯಾವುದೇ ಕ್ರಮಕ್ಕೆ ಮುಂದಾಗದಿರುವುದು ಆಘಾತ ತಂದಿದೆ ಎಂದು ಪಾಕ್ ಅಭಿಪ್ರಾಯಪಟ್ಟಿದೆ. 

ದೇಶದಲ್ಲಿ ಅಲ್ಪಸಂಖ್ಯಾತರ ವಿರುದ್ಧ ದ್ವೇಷ ಬಿತ್ತುವ ಚಟುವಟಿಕೆಗಳನ್ನು ನಿರ್ಬಂಧಿಸುವ ಜವಾಬ್ದಾರಿ ಭಾರತದ ಮೇಲಿದೆ, ಮುಂದಿನ ದಿನಗಳಲ್ಲಿ ಈ ಬಗೆಯ ಘಟನೆಗಳು ನಡೆಯದಂತೆ ಭಾರತ ಸರ್ಕಾರ ಎಚ್ಚರಿಕೆ ವಹಿಸಬೇಕು ಎಂದಿದೆ ಇಮ್ರಾನ್ ಸರ್ಕಾರ.

ಈ ಹಿಂದೆ ಕಾಂಗ್ರೆಸ್, ಟಿಎಂಸಿ ಸೇರಿದಂತೆ ಹಲವು ರಾಜಕೀಯ ಪಕ್ಷಗಳು ಹರಿದ್ವಾರದ ಧರ್ಮ ಸಂಸದ್ ಅಧಿವೇಶನ ಕುರಿತಾಗಿ ವಿರೋಧ ವ್ಯಕ್ತಪಡಿಸಿದ್ದವು. ಅಧಿವೇಶನದಲ್ಲಿ ಕೋಮು ಪ್ರಚೋದಕ ಭಾಷಣ ನೀಡಿದ ಜಿತೇಂದ್ರ ನಿತ್ಯಾನಂದ ತ್ಯಾಗಿ ವಿರುದ್ಧ ಎಫ್ ಐ ಆರ್ ಕೂಡ ದಾಖಲಾಗಿತ್ತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com