ನಾನು ರೈತನ ಮಗಳು, ರೈತರ ಕಲ್ಯಾಣಕ್ಕಾಗಿ ಶ್ರಮಿಸುತ್ತೇನೆ: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ

ರೈತರ ಪರ ಕೆಲಸ ಮಾಡುವ ಜವಾಬ್ದಾರಿಯನ್ನು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ನನಗೆ ನೀಡಿದ್ದಾರೆ. ರೈತರ ಕಲ್ಯಾಣಕ್ಕಾಗಿ ಶ್ರಮಿಸುತ್ತೇನೆ ಎಂದು ಕೇಂದ್ರದ ನೂತನ ಕೃಷಿ ಮತ್ತು ರೈತರ ಅಭಿವೃದ್ಧಿ ಖಾತೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಹೇಳಿದ್ದಾರೆ. 
ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ
ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ
Updated on

ನವದೆಹಲಿ: ರೈತರ ಪರ ಕೆಲಸ ಮಾಡುವ ಜವಾಬ್ದಾರಿಯನ್ನು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ನನಗೆ ನೀಡಿದ್ದಾರೆ. ರೈತರ ಕಲ್ಯಾಣಕ್ಕಾಗಿ ಶ್ರಮಿಸುತ್ತೇನೆ ಎಂದು ಕೇಂದ್ರದ ನೂತನ ಕೃಷಿ ಮತ್ತು ರೈತರ ಅಭಿವೃದ್ಧಿ ಖಾತೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ರೈತರ ಪರ ಕೆಲಸ ಮಾಡುವ ಜವಾಬ್ದಾರಿಯನ್ನು ನನಗೆ ನೀಡಲಾಗಿದೆ. ನಾನು ರೈತನ ಮಗಳು. ರೈತರ ನೋವು ನನಗೆ ತಿಳಿದಿದೆ. ರೈತರ ಕಲ್ಯಾಣಕ್ಕಾಗಿ ಕೆಲಸ ಮಾಡುತ್ತೇನೆ. ಸರ್ಕಾರದ ಲಾಭಗಳು, ಯೋಜನೆಗಳು ರೈತರಿಗೆ ತಲುಪುವಂತೆ ಮಾಡುತ್ತೇನೆಂದು ಹೇಳಿದ್ದಾರೆ. 

ಸರ್ಕಾರ ರೈತರೊಂದಿಗೆ ಮಾತುಕತೆ ನಡೆಸಿದೆ. ಈಗಲೂ ಮಾತನಾಡಲು ಸಿದ್ಧವಿದೆ. ಸರ್ಕಾರ ರೈತರೊಂದಿಗಿದೆ ಎಂಬುದನ್ನು ನಾವು ದೇಶಕ್ಕೆ ತಿಳಿಸಬೇಕಿದೆ ಎಂದು ತಿಳಿಸಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com