ಉತ್ತರ ಪ್ರದೇಶ: ರಾಜಕೀಯ ದ್ವೇಷಕ್ಕಾಗಿ ಮಹಿಳಾ ಅಭ್ಯರ್ಥಿ ಸೀರೆ ಎಳೆದಾಡಿದ ವೈರಿಗಳು!

ಉತ್ತರ ಪ್ರದೇಶದಲ್ಲಿ ನಡೆದ ಅಮಾನವೀಯ ಘಟನೆಯೊಂದರಲ್ಲಿ ಬ್ಲಾಕ್‌ ಪಂಚಾಯಿತಿ ಚುನಾವಣೆಗಾಗಿ ನಾಮಪತ್ರ ಸಲ್ಲಿಸಲು ಬಂದಿದ್ದ ಸಮಾಜವಾದಿ ಪಕ್ಷದ (ಎಸ್‌ಪಿ) ಮಹಿಳಾ ಅಭ್ಯರ್ಥಿಯ ಸೀರೆಯನ್ನು ರಾಜಕೀಯ ವೈರಿಗಳು ಎಳೆದಾಡಿದ್ದಾರೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on

ಲಕ್ನೋ: ಉತ್ತರ ಪ್ರದೇಶದಲ್ಲಿ ನಡೆದ ಅಮಾನವೀಯ ಘಟನೆಯೊಂದರಲ್ಲಿ ಬ್ಲಾಕ್‌ ಪಂಚಾಯಿತಿ ಚುನಾವಣೆಗಾಗಿ ನಾಮಪತ್ರ ಸಲ್ಲಿಸಲು ಬಂದಿದ್ದ ಸಮಾಜವಾದಿ ಪಕ್ಷದ (ಎಸ್‌ಪಿ) ಮಹಿಳಾ ಅಭ್ಯರ್ಥಿಯ ಸೀರೆಯನ್ನು ರಾಜಕೀಯ ವೈರಿಗಳು ಎಳೆದಾಡಿದ್ದಾರೆ.

ನಾಮಪತ್ರ ಸಲ್ಲಿಸಲು ಬಂದಿದ್ದ ಸಮಾಜವಾದಿ ಪಕ್ಷದ ಮಹಿಳಾ ಅಭ್ಯರ್ಥಿಯ ಸೀರೆ ಎಳೆದಾಡಿರುವ ರಾಜಕೀಯ ವೈರಿಗಳು ಆಕೆಯ ನಾಮಪತ್ರವನ್ನು ಕಸಿದುಕೊಂಡಿದ್ದಾರೆ. ಈ ರೀತಿ ಮಾಡುವ ಮೂಲಕ ಆಕೆ ನಾಮಪತ್ರ ಸಲ್ಲಿಸದಂತೆ ತಡೆದು ವಿರೋಧಿ ಬಣದ ಅಭ್ಯರ್ಥಿ ಅವಿರೋಧವಾಗಿ ಆಯ್ಕೆಯಾಗುವಂತೆ ಮಾಡಲು ಈ ದೃಷ್ಕೃತ್ಯಕ್ಕೆ ಕೈ ಹಾಕಿದ್ದಾರೆ.

ಈ ವಿಡಿಯೊವನ್ನು ಮಾಜಿ ಮುಖ್ಯಮಂತ್ರಿ ಹಾಗೂ ಸಮಾಜವಾದಿ ಪಕ್ಷದ ಅಧ್ಯಕ್ಷ ಅಖಿಲೇಶ್ ಯಾದವ್ ಹಂಚಿಕೊಂಡಿದ್ದು, 'ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ಗೂಂಡಾಗಳು ಮಹಿಳೆಗೆ ಅವಮಾನ ಮಾಡಿದ್ದಾರೆ' ಎಂದು ಆರೋಪಿಸಿದ್ದಾರೆ. ಲಕ್ನೋದಿಂದ ಸುಮಾರು 13ದ ಕಿಮೀ ದೂರದಲ್ಲಿರುವ ಲಖೀಂಪುರ ಕೇರಿಯಲ್ಲಿ ಈ ಘಟನೆ ನಡೆದಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com