ಪುದುಚೇರಿಯಲ್ಲಿ ಜುಲೈ16 ರಂದು ಶಾಲಾ-ಕಾಲೇಜ್ ಪುನರಾರಂಭ- ಮುಖ್ಯಮಂತ್ರಿ ಎನ್. ರಂಗಸ್ವಾಮಿ

ಕೋವಿಡ್-19 ಸಾಂಕ್ರಾಮಿಕದಿಂದ ಪುದುಚೇರಿಯಲ್ಲಿ ಹಲವು ತಿಂಗಳಿಂದ ಬಂದ್ ಆಗಿದ್ದ ಶಾಲಾ-ಕಾಲೇಜ್ ಗಳು ಜುಲೈ 16 ರಂದು ಪುನರಾರಂಭವಾಗಲಿವೆ.
ಪುದುಚೇರಿ ಮುಖ್ಯಮಂತ್ರಿ ಎನ್. ರಂಗಸ್ವಾಮಿ
ಪುದುಚೇರಿ ಮುಖ್ಯಮಂತ್ರಿ ಎನ್. ರಂಗಸ್ವಾಮಿ
Updated on

ಪುದುಚೇರಿ: ಕೋವಿಡ್-19 ಸಾಂಕ್ರಾಮಿಕದಿಂದ ಪುದುಚೇರಿಯಲ್ಲಿ ಹಲವು ತಿಂಗಳಿಂದ ಬಂದ್ ಆಗಿದ್ದ ಶಾಲಾ-ಕಾಲೇಜ್ ಗಳು ಜುಲೈ 16 ರಂದು ಪುನರಾರಂಭವಾಗಲಿವೆ.

ಜುಲೈ 16 ರಂದು ಕಾಲೇಜ್ ಗಳು ಪುನರಾರಂಭಗೊಳ್ಳಲಿವೆ. ಶಾಲೆಗಳು ಭಾಗಶಃ ಪುನಃ ತೆರೆಯಲ್ಪಡುತ್ತವೆ ಮತ್ತು ಒಂಬತ್ತರಿಂದ 12 ನೇ ತರಗತಿಗಳಿಗೆ ಮಾತ್ರ ತರಗತಿಗಳು ಆ ದಿನ ಪುನರಾರಂಭಗೊಳ್ಳುತ್ತವೆ ಎಂದು ಮುಖ್ಯಮಂತ್ರಿ ಎನ್. ರಂಗಸ್ವಾಮಿ ಭಾನುವಾರ ಹೇಳಿದರು.

ಹೊಸದಾಗಿ ಸಂಪುಟಕ್ಕೆ ಸೇರ್ಪಡೆಯಾದ ಐದು ಮಂತ್ರಿ ಸಹೋದ್ಯೋಗಿಗಳಿಗೆ ಖಾತೆ ಹಂಚಿಕೆ ಪಟ್ಟಿಯನ್ನು ಲೆಫ್ಟಿನೆಂಟ್ ಗವರ್ನರ್ ಡಾ. ತಮಿಳುಸಾಯಿ ಸುಂದರರಾಜನ್ ಅವರಿಗೆ ಸಲ್ಲಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡುತ್ತಿದ್ದರು.

ಈಗ ಕೇಂದ್ರಾಡಳಿತ ಪ್ರದೇಶದಲ್ಲಿ ಪರಿಸ್ಥಿತಿ ಸುಧಾರಿಸುತ್ತಿರುವುದರಿಂದ ಸರ್ಕಾರ ಈ ನಿರ್ಧಾರ ಕೈಗೊಂಡಿದೆ ಎಂದು ಮುಖ್ಯಮಂತ್ರಿ ಹೇಳಿದರು.ಪುದುಚೇರಿಯಲ್ಲಿ ಭಾನುವಾರ ಕೋವಿಡ್-19 ನಿಂದ ಯಾವುದೇ ಸಾವು ಸಂಭವಿಸಿಲ್ಲ. ಆದರೆ, ಹೊಸ ಪ್ರಕರಣಗಳ ಸಂಖ್ಯೆ 145 ಆಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com