ಉತ್ತರ ಪ್ರದೇಶ ಪಂಚಾಯಿತಿ ಚುನಾವಣೆ ವೇಳೆ ಹಲ್ಲೆ: ಸಮಾಜವಾದಿ ಪಕ್ಷದ ಕಾರ್ಯಕರ್ತೆಯರ ಭೇಟಿ ಮಾಡಿದ ಪ್ರಿಯಾಂಕಾ

ಉತ್ತರ ಪ್ರದೇಶ ಪಂಚಾಯಿತಿ ಅಧ್ಯಕ್ಷರ ಆಯ್ಕೆಗೆ ನಡೆದ ಚುನಾವಣೆ ವೇಳೆ ಬಿಜೆಪಿ ಕಾರ್ಯಕರ್ತರಿಂದ ಹಲ್ಲೆಗೆ ಒಳಗಾಗಿದ್ದರು ಎನ್ನಲಾದ ಸಮಾಜವಾದಿ ಪಕ್ಷದ ಇಬ್ಬರು ಮಹಿಳಾ ಸದಸ್ಯರನ್ನು ಕಾಂಗ್ರೆಸ್‌ನ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಶನಿವಾರ ಭೇಟಿ ಮಾಡಿದರು.
ಪ್ರಿಯಾಂಕಾ ಗಾಂಧಿ
ಪ್ರಿಯಾಂಕಾ ಗಾಂಧಿ
Updated on

ಲಕ್ನೋ: ಉತ್ತರ ಪ್ರದೇಶ ಪಂಚಾಯಿತಿ ಅಧ್ಯಕ್ಷರ ಆಯ್ಕೆಗೆ ನಡೆದ ಚುನಾವಣೆ ವೇಳೆ ಬಿಜೆಪಿ ಕಾರ್ಯಕರ್ತರಿಂದ ಹಲ್ಲೆಗೆ ಒಳಗಾಗಿದ್ದರು ಎನ್ನಲಾದ ಸಮಾಜವಾದಿ ಪಕ್ಷದ ಇಬ್ಬರು ಮಹಿಳಾ ಸದಸ್ಯರನ್ನು ಕಾಂಗ್ರೆಸ್‌ನ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಶನಿವಾರ ಭೇಟಿ ಮಾಡಿದರು.

ಲಖೀಂಪುರ ಖೇರಿಯ ಗ್ರಾಮದಲ್ಲಿ ಸಂತ್ರಸ್ತ ಮಹಿಳೆಯರನ್ನು ಭೇಟಿ ಮಾಡಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಈ ಮಹಿಳೆಯರು ಚುನಾವಣೆಗೆ ಸ್ಪರ್ಧಿಸುವುದು, ಅದಕ್ಕಾಗಿ ನಾಮಪತ್ರ ಸಲ್ಲಿಸುವುದು ಅವರ ಸಂವಿಧಾನದತ್ತ ಹಕ್ಕು. ಆದರೆ, ಅವರ ಈ ಹಕ್ಕನ್ನು ಕಸಿಯಲಾಗಿದೆ’ ಎಂದು ದೂರಿದರು. 

ಪಕ್ಷದ ಅಭ್ಯರ್ಥಿ ಋತು ಸಿಂಗ್‌ ಹಾಗೂ ಅವರಿಗೆ ಸೂಚಕಿಯಾಗಿದ್ದ ಅನಿತಾ ಯಾದವ್‌ ಅವರ ಸೀರೆಯನ್ನು ಎಳೆಯುವ ಮೂಲಕ ಬಿಜೆಪಿ ಕಾರ್ಯಕರ್ತರು ಅಸಭ್ಯವಾಗಿ ವರ್ತಿಸಿದ್ದರು ಎಂದು ಸಮಾಜವಾದಿ ಪಾರ್ಟಿ ಮುಖ್ಯಸ್ಥ ಅಖಿಲೇಶ್‌ ಯಾದವ್‌ ಆರೋಪಿಸಿದ್ದರು.

ರೀತಿ ಮಹಿಳೆಯರ ವಿರುದ್ಧ ದೌರ್ಜನ್ಯ ಎಸಗಿದವರಿಗೆ ಆಶ್ರಯ ನೀಡುವವರಿಗೆ ಜನರು ತಕ್ಕ ಪಾಠ ಕಲಿಸುವರು. ಮಹಿಳೆ ‍ಪಂಚಾಯಿತಿಯ ಪ್ರಧಾನ ಆಗುತ್ತಾಳೆ, ಶಾಸಕಿ, ಸಂಸದೆ ಆಗುತ್ತಾಳೆ. ಪ್ರಧಾನಿಯೂ ಆಗಿ, ಈ ಸರ್ಕಾರವನ್ನು ಕಿತ್ತೊಗೆಯುತ್ತಾಳೆ ಎಂಬ ಮಾತನ್ನು ಪ್ರಜಾಪ್ರಭುತ್ವ ಮೌಲ್ಯಗಳಿಗೆ ಧಕ್ಕೆ ತಂದಿರುವ ಬಿಜೆಪಿಯ ಗೂಂಡಾಗಳು ಗಮನವಿಟ್ಟು ಕೇಳಬೇಕು’ ಎಂದು ಅವರು ಹಿಂದಿಯಲ್ಲಿ ಟ್ವೀಟ್‌ ಮಾಡಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com