ಆಗಸ್ಟ್‌ 29ರಂದು ಆಯೋಧ್ಯೆಯ ರಾಮ ಲಲ್ಲಾಗೆ ರಾಷ್ಟ್ರಪತಿಗಳಿಂದ ಪೂಜೆ

ರಾಷ್ಟ್ರಪತಿ ರಾಮನಾಥ್ ಕೋವಿಂದ್ ಆಯೋಧ್ಯೆಯ ರಾಮ ಲಲ್ಲಾ ದೇಗುಲಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಲು ಮುಂದಿನ ತಿಂಗಳು ಉತ್ತರ ಪ್ರದೇಶಕ್ಕೆ ಭೇಟಿ ನೀಡುವ ನಿರೀಕ್ಷೆಯಿದೆ.
ರಾಷ್ಟ್ರಪತಿ ರಾಮನಾಥ್ ಕೋವಿಂದ್
ರಾಷ್ಟ್ರಪತಿ ರಾಮನಾಥ್ ಕೋವಿಂದ್
Updated on

ಲಕ್ನೋ: ರಾಷ್ಟ್ರಪತಿ ರಾಮನಾಥ್ ಕೋವಿಂದ್ ಆಯೋಧ್ಯೆಯ ರಾಮ ಲಲ್ಲಾ ದೇಗುಲಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಲು ಮುಂದಿನ ತಿಂಗಳು ಉತ್ತರ ಪ್ರದೇಶಕ್ಕೆ ಭೇಟಿ ನೀಡುವ ನಿರೀಕ್ಷೆಯಿದೆ. ಅಲ್ಲದೆ, ಗೋರಕ್ ಪುರದಲ್ಲಿ ಆಯುಷ್ ವಿಶ್ವವಿದ್ಯಾಲಯಕ್ಕೆ ಅಡಿಗಲ್ಲು ಇರಿಸಲಿರುವ ಕಾರ್ಯಕ್ರಮ ಸಹ ನಿಗಧಿಯಾಗಿದೆ ಎಂದು ಅಧಿಕಾರಿ ಮೂಲಗಳು ಹೇಳಿವೆ.

ಪ್ರಾಥಮಿಕ ಯೋಜನೆಯಂತೆ ರಾಷ್ಟ್ರಪತಿಗಳು ಲಕ್ನೋದಿಂದ ವಿಶೇಷ ರೈಲು ಮೂಲಕ ಆಯೋಧ್ಯೆ ತಲುಪುವ ನಿರೀಕ್ಷೆಯಿದೆ ಎಂದು ಅಧಿಕಾರಿಗಳು ಮಂಗಳವಾರ ಹೇಳಿದ್ದಾರೆ.

ಉತ್ತರ ಪ್ರದೇಶದಲ್ಲಿ ರಾಷ್ಟ್ರಪತಿ ರಾಮನಾಥ್ ಕೋವಿಂದ ಅವರ ಮೂರನೇ ವಿಶೇಷ ರೈಲು ಪ್ರಯಾಣ ಇದಾಗಲಿದ್ದು, ಈ ಮೊದಲು ದೆಹಲಿಯಿಂದ ಕಾನ್ಫುರ, ಎರಡನೆಯದಾಗಿ ಕಾನ್ಪುರದಿಂದ ಲಕ್ನೋಗೆ ವಿಶೇಷ ರೈಲಿನಲ್ಲಿ ಸಂಚರಿಸಿದ್ದರು.

ಆಗಸ್ಟ್ 27 ರಿಂದ 29ರವರೆಗೆ ರಾಷ್ಟ್ರಪತಿಗಳ ಉತ್ತರ ಪ್ರದೇಶ ಕಾರ್ಯಕ್ರಮ ನಿಗದಿಯಾಗಿದೆ. ಆಗಸ್ಟ್ 27 ರಂದು ರಾಷ್ಟ್ರಪತಿ ವಿಶೇಷ ವಿಮಾನದ ಮೂಲಕ ಅಮೌಸಿ ವಿಮಾನ ನಿಲ್ದಾಣ ತಲುಪಲಿದ್ದು, ಆಗಸ್ಟ್ 28ರಂದು ವಿಶೇಷ ವಿಮಾನದಲ್ಲಿ ಗೋರಕ್ ಪುರಕ್ಕೆ ತೆರಳಿ ಆಯುಷ್ ವಿಶ್ವವಿದ್ಯಾಲಯಕ್ಕೆ ಶಂಕುಸ್ಥಾಪನೆ, ಗುರು ಗೋರಕ್ ನಾಥ್ ವಿಶ್ವವಿದ್ಯಾಲಯ ಆಸ್ಪತ್ರೆ ನಿರ್ಮಾಣವನ್ನು ಉದ್ಘಾಟಿಸಲಿದ್ದಾರೆ. 

ನಂತರ ಅದೇ ದಿನ ಲಕ್ನೋ ಹಿಂದಿರುಗಲಿದ್ದಾರೆ. ಆಗಸ್ಟ್ 29ರಂದು  ವಿಶೇಷ ರೈಲಿನಲ್ಲಿ ಆಯೋಧ್ಯೆಗೆ ತೆರಳಿಲಿದ್ದು ಅಲ್ಲಿ   ರಾಮ ಲಲ್ಲಾ ಹಾಗೂ ಹನುಮಗ್ರಾಹಿ ದೇಗಲಗಳಲ್ಲಿ ವಿಶೇಷ ಪೂಜೆ ಸಲ್ಲಿಸಿದನಂತರ ಅಂದೇ ಲಕ್ನೋಗೆ ವಾಪಸ್ಸಾಗಲಿದ್ದು, ರಾಷ್ಟ್ರಪತಿ ಆಗಸ್ಟ್ 30ರಂದು ದೆಹಲಿಗೆ ಹಿಂದಿರುಗಲಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com