ವಿರೋಧ ಪಕ್ಷ ನಾಯಕರ ತೀವ್ರ ಗದ್ದಲ, ಕೋಲಾಹಲ: ಲೋಕಸಭಾ ಅಧಿವೇಶನ ಶುಕ್ರವಾರಕ್ಕೆ ಮುಂದೂಡಿಕೆ

ಇತ್ತೀಚಿನ ಮೂರು ಕೃಷಿ ಕಾಯ್ದೆ ಸೇರಿದಂತೆ ವಿವಿಧ ವಿಷಯಗಳನ್ನು ಮುಂದಿಟ್ಟುಕೊಂಡು ಪ್ರತಿಪಕ್ಷದ ಸದಸ್ಯರು ಘೋಷಣೆಗಳನ್ನು ಕೂಗುತ್ತಾ ಲೋಕಸಭಾ ಅಧಿವೇಶನಕ್ಕೆ ಅಡ್ಡಿಪಡಿಸಿದ್ದರಿಂದ ಗುರುವಾರ ಪದೇ ಪದೇ ಮುಂದೂಡಲಾಯಿತು.
ಲೋಕಸಭೆ ಅಧಿವೇಶನ
ಲೋಕಸಭೆ ಅಧಿವೇಶನ
Updated on

ನವದೆಹಲಿ: ಇತ್ತೀಚಿನ ಮೂರು ಕೃಷಿ ಕಾಯ್ದೆ ಸೇರಿದಂತೆ ವಿವಿಧ ವಿಷಯಗಳನ್ನು ಮುಂದಿಟ್ಟುಕೊಂಡು ಪ್ರತಿಪಕ್ಷದ ಸದಸ್ಯರು ಘೋಷಣೆಗಳನ್ನು ಕೂಗುತ್ತಾ ಲೋಕಸಭಾ ಅಧಿವೇಶನಕ್ಕೆ ಅಡ್ಡಿಪಡಿಸಿದ್ದರಿಂದ ಗುರುವಾರ ಪದೇ ಪದೇ ಮುಂದೂಡಲಾಯಿತು.

ಪದೇ ಪದೇ ಮುಂದೂಡಿಕೆ ನಂತರ ಸಂಜೆ 4 ಗಂಟೆಗೆ ಮತ್ತೆ ಅಧಿವೇಶನ ಆರಂಭವಾಯಿತು. ಈ ವೇಳೆ ಅಧ್ಯಕ್ಷರಾಗಿದ್ದ ಭರ್ತುಹಾರಿ ಮಹತಾಬ್ ಅವರು ಪ್ರತಿಭಟನಾ ನಿರತ ಸದಸ್ಯರನ್ನು ತಮ್ಮ ಆಸನಗಳಿಗೆ ಹಿಂತಿರುಗುವಂತೆ ಕೇಳಿಕೊಂಡಾಗಲೂ ಸದಸ್ಯರು ಮಾತುಗಳನ್ನು ಕೇಳದೆ ಪ್ರತಿಭಟನೆ ಮುಂದುವರೆಸಿದ್ದವು.

ಈ ಹಿನ್ನಲೆಯಲ್ಲಿ ಲೋಕಸಭೆ ಅಧಿವೇಶನವನ್ನು ಶುಕ್ರವಾರ ಬೆಳಿಗ್ಗೆ 11 ಗಂಟೆಗೆ ಮುಂದೂಡಲಾಗಿದೆ.

ಪೆಗಾಸಸ್ ಬೇಹುಗಾರಿಕೆ ವಿವಾದ ಮತ್ತು ಮೂರು ಕೃಷಿ ಕಾಯ್ದೆ ಹಿಂತೆಗೆದುಕೊಳ್ಳುವಂತೆ ಒತ್ತಾಯಿಸಿ ಹಲವಾರು ವಿಷಯಗಳ ಕುರಿತು ಪ್ರತಿಪಕ್ಷದ ಸದಸ್ಯರು ಘೋಷಣೆಗಳನ್ನು ಕೂಗುತ್ತಾ ಕೋಲಾಹಲ ಸೃಷ್ಟಿಸಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com