ಹೊಸ ಐಟಿ ನಿಯಮ ಪ್ರಶ್ನಿಸಿ ಮಾಧ್ಯಮಗಳ ಅರ್ಜಿ ಸಂಬಂಧ ಕೇಂದ್ರ ಸರ್ಕಾರಕ್ಕೆ ಮದ್ರಾಸ್ ಹೈಕೋರ್ಟ್ ನೋಟಿಸ್!

2021ರ ಮಾಹಿತಿ ತಂತ್ರಜ್ಞಾನ ನಿಯಮಗಳ ಸಾಂವಿಧಾನಿಕ ಸಿಂಧುತ್ವವನ್ನು ಪ್ರಶ್ನಿಸಿ ಹದಿಮೂರು ಮಾಧ್ಯಮಗಳನ್ನು ಒಳಗೊಂಡ ಡಿಜಿಟಲ್ ನ್ಯೂಸ್ ಪಬ್ಲಿಷರ್ಸ್ ಅಸೋಸಿಯೇಶನ್ ಸಲ್ಲಿಸಿದ್ದ ಅರ್ಜಿಗೆ ಸಂಬಂಧಿಸಿದಂತೆ ಮದ್ರಾಸ್ ಹೈಕೋರ್ಟ್ ಕೇಂದ್ರ ಸರ್ಕಾರಕ್ಕೆ ನೋಟಿಸ್ ನೀಡಿದೆ.
ಮದ್ರಾಸ್ ಹೈಕೋರ್ಟ್
ಮದ್ರಾಸ್ ಹೈಕೋರ್ಟ್
Updated on

ಚೆನ್ನೈ: 2021ರ ಮಾಹಿತಿ ತಂತ್ರಜ್ಞಾನ ನಿಯಮಗಳ ಸಾಂವಿಧಾನಿಕ ಸಿಂಧುತ್ವವನ್ನು ಪ್ರಶ್ನಿಸಿ ಹದಿಮೂರು ಮಾಧ್ಯಮಗಳನ್ನು ಒಳಗೊಂಡ ಡಿಜಿಟಲ್ ನ್ಯೂಸ್ ಪಬ್ಲಿಷರ್ಸ್ ಅಸೋಸಿಯೇಶನ್ ಸಲ್ಲಿಸಿದ್ದ ಅರ್ಜಿಗೆ ಸಂಬಂಧಿಸಿದಂತೆ ಮದ್ರಾಸ್ ಹೈಕೋರ್ಟ್ ಕೇಂದ್ರ ಸರ್ಕಾರಕ್ಕೆ ನೋಟಿಸ್ ನೀಡಿದೆ.

ಮುಖ್ಯ ನ್ಯಾಯಮೂರ್ತಿ ಸಂಜೀಬ್ ಬ್ಯಾನರ್ಜಿ ಮತ್ತು ನ್ಯಾಯಮೂರ್ತಿ ಸೆಂಥಿಲ್ ಕುಮಾರ್ ರಾಮಮೂರ್ತಿ ಅವರನ್ನೊಳಗೊಂಡ ನ್ಯಾಯಪೀಠವು ಪ್ರಸ್ತುತ ಅರ್ಜಿಗೆ ಕೆಲ ದಿನಗಳ ಹಿಂದೆ ಕರ್ನಾಟಕ ಸಂಗೀತಗಾರ ಟಿ.ಎಂ.ಕೃಷ್ಣ ಸಲ್ಲಿಸಿದ್ದ ಅರ್ಜಿಯನ್ನು ಟ್ಯಾಗ್ ಮಾಡಿದೆ. 

ನಿರ್ದಿಷ್ಟವಾಗಿ 12, 14 ಮತ್ತು 16 ನಿಯಮಗಳ ಅಡಿಯಲ್ಲಿ ಯಾವುದೇ ದಬ್ಬಾಳಿಕೆ ಮತ್ತು ಬಲವಂತದ ಕ್ರಮಗಳನ್ನು ತೆಗೆದುಕೊಂಡರೆ ನ್ಯಾಯಾಲಯವನ್ನು ಸಂಪರ್ಕಿಸಲು ಸಂಘಕ್ಕೆ ಮಧ್ಯಂತರ ಅವಕಾಶವನ್ನು ನ್ಯಾಯಪೀಠ ನೀಡಿದೆ. 

ಅರ್ಜಿದಾರರ ಪರ ಹಾಜರಾದ ಹಿರಿಯ ವಕೀಲ ಪಿ.ಎಸ್.ರಾಮನ್, ಐಟಿ ನಿಯಮಗಳ ಎರಡು ನಿಬಂಧನೆಗಳು ಸಂಘವು ಕೆರಳುವಂತೆ ಮಾಡಿದೆ. ನಿರ್ದಿಷ್ಟವಾಗಿ ನಿಯಮ 16. ಇದು ಯಾವುದೇ ಡಿಜಿಟಲ್ ಮಾಹಿತಿಗೆ ಸಾರ್ವಜನಿಕ ಪ್ರವೇಶವನ್ನು ನಿರ್ಬಂಧಿಸಲು ಕೇಂದ್ರ ಮಾಹಿತಿ ಮತ್ತು ಪ್ರಸಾರ ಸಚಿವಾಲಯದ ಕಾರ್ಯದರ್ಶಿಗೆ ಅಧಿಕಾರ ನೀಡುವ ಸರ್ವಭಕ್ಷಕ ನಿಬಂಧನೆಯಾಗಿದೆ. ಆದ್ದರಿಂದ, ಈ ನಿಯಮಗಳ ಅಡಿಯಲ್ಲಿ ಯೂನಿಯನ್ ಯಾವುದೇ ಕ್ರಮ ತೆಗೆದುಕೊಳ್ಳದಂತೆ ತಡೆಯುವ ಮಧ್ಯಂತರ ಆದೇಶವನ್ನು ನ್ಯಾಯಾಲಯವು ಅಂಗೀಕರಿಸಬೇಕೆಂದು ಅವರು ವಾದಿಸಿದರು.

ಆದರೆ, ಈ ಹಂತದಲ್ಲಿ ಮಧ್ಯಂತರ ಆದೇಶ ಹೊರಡಿಸುವ ಅಗತ್ಯವಿಲ್ಲ ಎಂದು ನ್ಯಾಯಪೀಠ ಅಭಿಪ್ರಾಯಪಟ್ಟಿದ್ದು, ಮಾಧ್ಯಮಗಳ ವಿರುದ್ಧ ಇನ್ನೂ ಯಾವುದೇ ಬಲವಂತದ ಕ್ರಮ ಕೈಗೊಂಡಿಲ್ಲ. ಈವರೆಗೆ ಅರ್ಜಿದಾರರ ವಿರುದ್ಧ ಯಾವುದೇ ಪ್ರತಿಕೂಲ ಕ್ರಮಗಳನ್ನು ತೆಗೆದುಕೊಂಡಿರದ ಈ ಹಂತದಲ್ಲಿ ಯಾವುದೇ ಆದೇಶವನ್ನು ನೀಡಲು ಸಾಧ್ಯವಿಲ್ಲ. ಆದಾಗ್ಯೂ, ಒಂದು ವೇಳೆ ಬಲವಂತದ ಕ್ರಮಗಳನ್ನು ಕೈಗೊಂಡರೆ ಅರ್ಜಿದಾರರು ಮಧ್ಯಂತರ ಅರ್ಜಿ ಸಲ್ಲಿಸಲು ಸ್ವಾತಂತ್ರರು ಎಂದು ನ್ಯಾಯಪೀಠ ಹೇಳಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com