ಸಿಖ್ಖರ ಧಾರ್ಮಿಕ ಗುರು ತೇಜ್ ಬಹದ್ದೂರ್ ರ 400ನೇ ಜಯಂತಿ: ದೆಹಲಿಯ ಗುರುದ್ವಾರಕ್ಕೆ ಭೇಟಿ ನೀಡಿ ಪ್ರಧಾನಿ ಪೂಜೆ ಸಲ್ಲಿಕೆ  

ಸಿಖ್ ಧರ್ಮೀಯರ 9ನೇ ಧಾರ್ಮಿಕ ಗುರು ಗುರು ತೇಜ್ ಬಹದ್ದೂರ್ ಅವರ 400 ನೇ ಪ್ರಕಾಶ್ ಪರ್ವ ಅಂಗವಾಗಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಶನಿವಾರ ಬೆಳಗ್ಗೆ ದೆಹಲಿಯಲ್ಲಿರುವ ಗುರುದ್ವಾರ ಗಂಜ್ ಸಾಹಿಬ್ ಗೆ ಭೇಟಿ ನೀಡಿ ವಿಶೇಷ ಪ್ರಾರ್ಥನೆ ಸಲ್ಲಿಸಿದ್ದಾರೆ.
ಗುರುದ್ವಾರದಲ್ಲಿ ಪ್ರಧಾನಿ ವಿಶೇಷ ಪೂಜೆ ಸಲ್ಲಿಕೆ
ಗುರುದ್ವಾರದಲ್ಲಿ ಪ್ರಧಾನಿ ವಿಶೇಷ ಪೂಜೆ ಸಲ್ಲಿಕೆ
Updated on

ನವದೆಹಲಿ: ಸಿಖ್ ಧರ್ಮೀಯರ 9ನೇ ಧಾರ್ಮಿಕ ಗುರು ಗುರು ತೇಜ್ ಬಹದ್ದೂರ್ ಅವರ 400 ನೇ ಜಯಂತ್ಯೋತ್ಸವ ಅಂಗವಾಗಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಶನಿವಾರ ಬೆಳಗ್ಗೆ ದೆಹಲಿಯಲ್ಲಿರುವ ಗುರುದ್ವಾರ ಗಂಜ್ ಸಾಹಿಬ್ ಗೆ ಭೇಟಿ ನೀಡಿ ವಿಶೇಷ ಪ್ರಾರ್ಥನೆ ಸಲ್ಲಿಸಿದ್ದಾರೆ.

ಯಾವುದೇ ಭದ್ರತೆ ಮತ್ತು ವಿಶೇಷ ಭದ್ರತಾ ವ್ಯವಸ್ಥೆಗಳಿಲ್ಲದೆ ಸರಳವಾಗಿ ಗುರುದ್ವಾರಕ್ಕೆ ಭೇಟಿ ನೀಡಿದ ಅವರು ವಿಶೇಷ ಪೂಜೆ, ಪ್ರಾರ್ಥನೆಯಲ್ಲಿ ಭಾಗಿಯಾಗಿದ್ದರು.

ಇದಕ್ಕೂ ಮುನ್ನ ಸೋಷಿಯಲ್ ಮೀಡಿಯಾದಲ್ಲಿ ಟ್ವೀಟ್ ಮಾಡಿದ ಪ್ರಧಾನಿ, 400ನೇ ಪ್ರಕಾಶ್ ಪುರಬ್ ಸಂದರ್ಭದಲ್ಲಿ ನಾನು ಗೌರವಪೂರ್ವಕವಾಗಿ ಗುರು ತೇಜ ಬಹದ್ದೂರ್ ಅವರಿಗೆ ನಮಿಸುತ್ತೇನೆ. ಧೈರ್ಯ, ಸಾಹಸ ಮತ್ತು ಸಮಾಜದ ನಿರ್ಗತಿಕರ ಏಳಿಗೆಗಾಗಿ ಸೇವೆ ಸಲ್ಲಿಸುತ್ತಿದ್ದ ತೇಜ ಬಹದ್ದೂರ್ ಅವರನ್ನು ಜಗತ್ತಿನಾದ್ಯಂತ ಜನರು ಗೌರವಿಸಿ ಪ್ರೀತಿಸುತ್ತಿದ್ದರು. ಅನ್ಯಾಯ ಮತ್ತು ದಬ್ಬಾಳಿಕೆಯನ್ನು ಖಂಡಿಸುತ್ತಿದ್ದರು. ಅವರ ಶ್ರೇಷ್ಠ ತ್ಯಾಗ ಶಕ್ತಿ ಮತ್ತು ಪ್ರೇರಣೆಯನ್ನು ಹಲವರಿಗೆ ನೀಡಲಿದೆ ಎಂದು ಹೇಳಿದ್ದಾರೆ.

ಗುರು ತೇಜ ಬಹದ್ದೂರ್ ಅವರ 400ನೇ ಜಯಂತಿ ಸಂದರ್ಭದಲ್ಲಿ ಸಿಖ್ಖರ ಪವಿತ್ರ ಖ್ಯಾತ ದೇವಾಲಯ ಅಮೃತಸರದ ಸ್ವರ್ಣ ಮಂದಿರದಲ್ಲಿ ಭಕ್ತರು ಸರೋವರದಲ್ಲಿ ಸ್ನಾನ ಮಾಡುತ್ತಾರೆ, ಆದರೆ ಈ ಬಾರಿ ಕೊರೋನಾ ಕಾರಣದಿಂದ ಸಾಂಪ್ರದಾಯಿಕವಾಗಿ ಸರಳ ಆಚರಣೆ ನಡೆಯುತ್ತದೆ.

ಸಿಖ್ಖರ 9ನೇ ಧಾರ್ಮಿಕ ಗುರು ತೇಜ ಬಹದ್ದೂರ್ ಏಪ್ರಿಲ್ 1, 1621ರಿಂದ ನವೆಂಬರ್ 11, 1675ರವರೆಗೆ ಧರ್ಮ ಗುರುವಾಗಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com