ತಮಿಳು ನಾಡು: ಕಡಲೂರಿನ ಕೀಟನಾಶಕ ಕಾರ್ಖಾನೆಯಲ್ಲಿ ಬೆಂಕಿ ದುರಂತ; ನಾಲ್ವರು ಸಾವು, 15 ಮಂದಿಗೆ ಗಾಯ

ಕೀಟನಾಶಕ ತಯಾರಿಕೆ ಕಾರ್ಖಾನೆಯಲ್ಲಿ ಬೆಂಕಿ ಅವಘಡ ಸಂಭವಿಸಿ ನಾಲ್ವರು ಮೃತಪಟ್ಟು 15 ಮಂದಿ ಗಾಯಗೊಂಡಿರುವ ಘಟನೆ ತಮಿಳು ನಾಡಿನ ಕಡಲೂರಿನಲ್ಲಿ ಇಂದು ಬೆಳಗ್ಗೆ ನಡೆದಿದೆ.
ಕೀಟನಾಶಕ ಕಾರ್ಖಾನೆಯಲ್ಲಿ ಬೆಂಕಿ ದುರಂತ
ಕೀಟನಾಶಕ ಕಾರ್ಖಾನೆಯಲ್ಲಿ ಬೆಂಕಿ ದುರಂತ

ಚೆನ್ನೈ: ಕೀಟನಾಶಕ ತಯಾರಿಕೆ ಕಾರ್ಖಾನೆಯಲ್ಲಿ ಬೆಂಕಿ ಅವಘಡ ಸಂಭವಿಸಿ ನಾಲ್ವರು ಮೃತಪಟ್ಟು 15 ಮಂದಿ ಗಾಯಗೊಂಡಿರುವ ಘಟನೆ ತಮಿಳು ನಾಡಿನ ಕಡಲೂರಿನಲ್ಲಿ ಇಂದು ಬೆಳಗ್ಗೆ ನಡೆದಿದೆ.

ಕಡಲೂರಿನ ಕುಡಿಕಾಡು ಎಂಬಲ್ಲಿ ಸಿಪ್ಕೊಟ್ ಕೈಗಾರಿಕಾ ಎಸ್ಟೇಟ್ ನಲ್ಲಿರುವ ಕೀಟನಾಶಕ ತಯಾರಿಕಾ ಕಾರ್ಖಾನೆಯಲ್ಲಿ ದುರಂತ ಸಂಭವಿಸಿದೆ.

ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಇಂತಹ ಬೆಂಕಿ ಅವಘಡದಂತಹ ದುರ್ಘಟನೆಗಳು ನಡೆಯುವುದನ್ನು ತಪ್ಪಿಸದಿದ್ದರೆ ಕಂಪೆನಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವ ಸಿ ವಿ ಗಣೇಶನ್ ತಿಳಿಸಿದ್ದಾರೆ.

ಮೃತಪಟ್ಟವರಲ್ಲಿ ಮೂವರನ್ನು ರಾಜ್ ಕುಮಾರ್, ಗಣಪತಿ ಮತ್ತು ಸವಿತಾ ಎಂದು ಗುರುತಿಸಲಾಗಿದ್ದು ನಾಲ್ಕನೇ ವ್ಯಕ್ತಿ ಗುರುತು ಪತ್ತೆಯಾಗಿಲ್ಲ. ಗಾಯಗೊಂಡವರನ್ನು ಕಡಲೂರು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಬೆಂಕಿ ಅವಘಡ ಸಂಭವಿಸುವ ವೇಳೆ ಸುಮಾರು 15 ಮಂದಿ ಕಾರ್ಮಿಕರು ಒಳಗಿದ್ದರು. ಕೂಡಲೇ ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಬಂದು ಬೆಂಕಿಯನ್ನು ನಂದಿಸಿದ್ದರಿಂದ ಹೆಚ್ಚಿನ ಅವಘಡ ತಪ್ಪಿಹೋಗಿದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com