ಕೋವಿಡ್-19 ಸೋಂಕಿನಿಂದ ಮೃತಪಟ್ಟ ಕುಟುಂಬಕ್ಕೆ ದೆಹಲಿ ಸರ್ಕಾರದಿಂದ 50 ಸಾವಿರ ಪರಿಹಾರ ಘೋಷಣೆ

ಕೋವಿಡ್-19 ಸಾಂಕ್ರಾಮಿಕದಿಂದ ಮೃತಪಟ್ಟ ಪ್ರತಿ ಕುಟುಂಬಕ್ಕೆ 50 ಸಾವಿರ ಪರಿಹಾರವನ್ನು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್  ಮಂಗಳವಾರ ಪ್ರಕಟಿಸಿದ್ದಾರೆ.
ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್
ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್
Updated on

ನವದೆಹಲಿ: ಕೋವಿಡ್-19 ಸಾಂಕ್ರಾಮಿಕದಿಂದ ಮೃತಪಟ್ಟ ಪ್ರತಿ ಕುಟುಂಬಕ್ಕೆ 50 ಸಾವಿರ ಪರಿಹಾರವನ್ನು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್  ಮಂಗಳವಾರ ಪ್ರಕಟಿಸಿದ್ದಾರೆ.

ಸಂಪಾದನೆ ಮಾಡುತ್ತಿದ್ದ ಪ್ರಮುಖ ವ್ಯಕ್ತಿ ಮೃತಪಟ್ಟಂತಹ ಕುಟುಂಬಗಳಿಗೆ ಪರಿಹಾರದ ಜೊತೆಗೆ ಪ್ರತಿ ತಿಂಗಳು 2500 ಪಿಂಚಣಿಯನ್ನು ಘೋಷಿಸಲಾಗಿದೆ.

ಒಂದು ವೇಳೆ ಗಂಡ ಮೃತಪಟ್ಟಿದ್ದರೆ, ಹೆಂಡತಿಗೆ ಪಿಂಚಣಿ ನೀಡಲಾಗುವುದು, ಪತ್ನಿ ಸಾವನ್ನಪ್ಪಿದ್ದರೆ ಗಂಡನಿಗೆ ಪಿಂಚಣಿ ಸಿಗಲಿದೆ. ಒಂದು ಅವಿವಾಹಿತರು ಮೃತಪಟ್ಟಿದ್ದರೆ, ಅವರ ಪೋಷಕರಿಗೆ ಪಿಂಚಣಿ ದೊರೆಯಲಿದೆ.

ಕೋವಿಡ್ ನಿಂದ ಅನಾಥರಾದ ಅಥವಾ ಫೋಷಕರನ್ನು ಕಳೆದುಕೊಂಡ ಮಕ್ಕಳಿಗೆ ಅವರ 25 ನೇ ವಯಸ್ಸಿನವರೆಗೂ ಪ್ರತಿ ತಿಂಗಳು 2500 ರೂ. ಪಿಂಚಣಿ  ದೊರೆಯಲಿದೆ.ಅಲ್ಲದೇ ಉಚಿತವಾಗಿ ಶಿಕ್ಷಣ ಕೂಡಾ ಸಿಗಲಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com