ಯಾಸ್ ಚಂಡಮಾರುತ: ಆಂಧ್ರದ ಕಡಲ ತೀರದ ಮೂರು ಜಿಲ್ಲೆಗಳಿಗೆ ವಿಪತ್ತು ನಿರ್ವಹಣಾ ಪ್ರಾಧಿಕಾರದಿಂದ ಎಚ್ಚರಿಕೆ

ತೀವ್ರವಾದ ಚಂಡಮಾರುತ ಗಾಳಿ ಯಾಸ್ ಹಿನ್ನೆಯಲ್ಲಿ ಆಂಧ್ರದ ಕಡಲ ತೀರದ ಮೂರು ಜಿಲ್ಲೆಗಳಿಗೆ ವಿಪತ್ತು ನಿರ್ವಹಣಾ ಪ್ರಾಧಿಕಾರ ಎಚ್ಚರಿಕೆಯನ್ನು ನೀಡಿದೆ.
ಯಾಸ್ ಚಂಡಮಾರುತದ ಹಿನ್ನೆಲೆ ಪಶ್ಚಿಮ ಬಂಗಾಳದ ಪೂರ್ವ ಪೂರ್ವ ಮಿಡ್ನಾಪೋರ್ ಜಿಲ್ಲೆಯಲ್ಲಿ ಕಂಡುಬಂದ ದೃಶ್ಯ
ಯಾಸ್ ಚಂಡಮಾರುತದ ಹಿನ್ನೆಲೆ ಪಶ್ಚಿಮ ಬಂಗಾಳದ ಪೂರ್ವ ಪೂರ್ವ ಮಿಡ್ನಾಪೋರ್ ಜಿಲ್ಲೆಯಲ್ಲಿ ಕಂಡುಬಂದ ದೃಶ್ಯ
Updated on

ಅಮರಾವತಿ: ತೀವ್ರವಾದ ಚಂಡಮಾರುತ ಗಾಳಿ ಯಾಸ್ ಹಿನ್ನೆಯಲ್ಲಿ ಆಂಧ್ರದ ಕಡಲ ತೀರದ ಮೂರು ಜಿಲ್ಲೆಗಳಿಗೆ ವಿಪತ್ತು ನಿರ್ವಹಣಾ ಪ್ರಾಧಿಕಾರ ಎಚ್ಚರಿಕೆಯನ್ನು ನೀಡಿದೆ.

ಶ್ರೀಕಾಕುಳಂ, ವಿಜಿಯನಗರಂ, ವಿಶಾಖಪಟ್ಟಣಂ ಜಿಲ್ಲೆಗಳಿಗೆ ಎಸ್ ಡಿಎಂಎ ಎಚ್ಚರಿಕೆ ನೀಡಿದ್ದು, ಪ್ರತಿ ಗಂಟೆಗೆ ಚಂಡಮಾರುತ 50-60 ಕಿ.ಮೀ ವೇಗದಲ್ಲಿ ಬೀಸುವ ಸಾಧ್ಯತೆ ಇದ್ದು 70 ಕಿ.ಮೀ ವೇಗಕ್ಕೆ ಏರಿಕೆಯಾಗುವ ಸಾಧ್ಯತೆ ಇದೆ ಎಂದು ಹೇಳಿದೆ.

ಮೀನುಗಾರರಿಗೂ ಎಚ್ಚರಿಕೆ ನೀಡಿರುವ ವಿಪತ್ತು ನಿರ್ವಹಣಾ ಪ್ರಾಧಿಕಾರ ಸಮುದ್ರಕ್ಕೆ ಇಳಿಯದಂತೆ ಎಚ್ಚರಿಸಿದೆ. "ಮೇ.27 ರ ಬೆಳಿಗ್ಗೆ ವರೆಗೂ ಬಂಗಾಳ ಕೊಲ್ಲಿ ಪ್ರದೇಶದಲ್ಲಿ ಮೀನುಗಾರರು ಸಮುದ್ರಕ್ಕೆ ಇಳಿಯಬಾರದೆಂದು ಸಲಹೆ ನೀಡಲಾಗಿದೆ" ಎಂದು ತಿಳಿಸಿದೆ.

ಕಡಲ ತೀರದ ಗ್ರಾಮಗಳಲ್ಲಿ ಶ್ರೀಕಾಕುಳಂ ಜಿಲ್ಲಾಡಳಿತ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ, ಒಡಿಶಾ ಗಡಿಯಲ್ಲಿರುವ ಶ್ರೀಕಾಕುಳಂ ಜಿಲ್ಲೆಯ ಪ್ರದೇಶಗಳಲ್ಲಿ ಯಾವುದೇ ಪರಿಸ್ಥಿತಿಯನ್ನು ನಿಭಾಯಿಸುವುದಕ್ಕಾಗಿ ಜಿಲ್ಲಾಡಳಿತ ಸಜ್ಜುಗೊಂಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com