ಶೋಪಿಯಾನ್‍ ನಲ್ಲಿ ಗುಂಡಿನ ಚಕಮಕಿ: ಓರ್ವ ಉಗ್ರನನ್ನು ಹೊಡೆದುರುಳಿಸಿದ ಸೇನೆ

ದಕ್ಷಿಣ ಕಾಶ್ಮೀರ ಜಿಲ್ಲೆಯಾದ ಶೋಪಿಯಾನ್‍ ನಲ್ಲಿ ಭದ್ರತಾ ಪಡೆಗಳು ನಡೆಸಿದ ತೀವ್ರ ಶೋಧ ಕಾರ್ಯಾಚರಣೆ ವೇಳೆ ಓರ್ವ ಭಯೋತ್ಪಾದಕ ಹತನಾಗಿದ್ದಾನೆ.
ಭಾರತೀಯ ಸೇನೆ
ಭಾರತೀಯ ಸೇನೆ

ಶ್ರೀನಗರ: ದಕ್ಷಿಣ ಕಾಶ್ಮೀರ ಜಿಲ್ಲೆಯಾದ ಶೋಪಿಯಾನ್‍ ನಲ್ಲಿ ಭದ್ರತಾ ಪಡೆಗಳು ನಡೆಸಿದ ತೀವ್ರ ಶೋಧ ಕಾರ್ಯಾಚರಣೆ ವೇಳೆ ಓರ್ವ ಭಯೋತ್ಪಾದಕ ಹತನಾಗಿದ್ದಾನೆ.

ಖಚಿತ ಮಾಹಿತಿಯನ್ನಾಧರಿಸಿ ಜಮ್ಮು-ಕಾಶ್ಮೀರ ವಿಶೇಷ ಕಾರ್ಯಚರಣೆ ತಂಡ ಶೋಪಿಯಾನ್ ನ ಗನೌಪೋರಾದಲ್ಲಿ ಸೇನೆ ಮತ್ತು ಸಿಆರ್ ಪಿಎಫ್ ಜಂಟಿಯಾಗಿ ಶೋಧ ಕಾರ್ಯಾಚರಣೆಯನ್ನು ಆರಂಭಿಸಿದ್ದವು.

ಭದ್ರತಾ ಪಡೆಗಳು ನಿರ್ದಿಷ್ಟ ಸ್ಥಳದತ್ತ ಸಾಗುತ್ತಿದ್ದಾಗ ಅಡಗಿ ಕುಳಿತಿದ್ದ ಭಯೋತ್ಪಾದಕರು ಗುಂಡು ಹಾರಿಸಿದ್ದಾರೆ. ಇದಕ್ಕೆ ಪ್ರತಿಯಾಗಿ ಭದ್ರತಾ ಪಡೆಗಳು ಗುಂಡು ಹಾರಿಸಿದ್ದು ಪರಸ್ಪರ ಗುಂಡಿನ ಚಕಮಕಿ ನಡೆದು ಓರ್ವ ಉಗ್ರ ಹತನಾಗಿದ್ದಾನೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com