ಮಹಾರಾಷ್ಟ್ರದಲ್ಲಿ ವಸತಿ ಕಟ್ಟಡ ಕುಸಿತ: 7 ಮಂದಿ ದಾರುಣ ಸಾವು

ಮಹಾರಾಷ್ಟ್ರದ ಠಾಣೆಯಲ್ಲಿ ಶುಕ್ರವಾರ ರಾತ್ರಿ ವಸತಿ ಕಟ್ಟಡ ಕುಸಿತದ ಪರಿಣಾಮ ಉಂಟಾಗಿರುವ ದುರಂತದಲ್ಲಿ ಏಳು ಮಂದಿ ಸಾವಿಗೀಡಾಗಿದ್ದಾರೆ. 
ಮಹಾರಾಷ್ಟ್ರದಲ್ಲಿ ಕಟ್ಟಡ ಕುಸಿತ
ಮಹಾರಾಷ್ಟ್ರದಲ್ಲಿ ಕಟ್ಟಡ ಕುಸಿತ
Updated on

ಮುಂಬೈ: ಮಹಾರಾಷ್ಟ್ರದ ಠಾಣೆಯಲ್ಲಿ ಶುಕ್ರವಾರ ರಾತ್ರಿ ವಸತಿ ಕಟ್ಟಡ ಕುಸಿತದ ಪರಿಣಾಮ ಉಂಟಾಗಿರುವ ದುರಂತದಲ್ಲಿ ಏಳು ಮಂದಿ ಸಾವಿಗೀಡಾಗಿದ್ದಾರೆ. 

ಠಾಣೆಯ ಉಲ್ಹಾಸ್‌ನಗರದಲ್ಲಿ ಕಟ್ಟಡದ ಸ್ಲ್ಯಾಬ್ ಕುಸಿತದ ಪರಿಣಾಮ ದುರಂತ ಸಂಭವಿಸಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಕಟ್ಟಡದ ಅವಶೇಷಗಳಿಂದ ಏಳು ಮೃತದೇಹಗಳನ್ನು ಹೊರತೆಗೆಯಲಾಗಿದೆ. ಮತ್ತಷ್ಟು ಮಂದಿ ಸಿಲುಕಿರುವುದಾಗಿ ಶಂಕಿಸಲಾಗಿದ್ದು, ರಕ್ಷಣಾ ಕಾರ್ಯಾಚರಣೆ ಜಾರಿಯಲ್ಲಿದೆ ಎಂದು ಠಾಣೆ ಮಹಾನಗರ ಪಾಲಿಕೆ (ಟಿಎಂಸಿ) ತಿಳಿಸಿದೆ.

ನೆಹರೂ ಚೌಕ್ ಪ್ರದೇಶದ ಸಾಯಿ ಸಿದ್ಧಿ ಕಟ್ಟಡದ ಐದನೇ ಮಹಡಿಯ ಸ್ಲ್ಯಾಬ್ ಕುಸಿದ ಪರಿಣಾಮ ದುರಂತ ಸಂಭವಿಸಿದೆ ಎಂದು ಪ್ರಾದೇಶಿಕ ವಿಪತ್ತು ನಿರ್ವಹಣಾ ವಿಭಾಗದ ಮುಖ್ಯಸ್ಥ ಸಂತೋಷ್ ಕದಮ್ ಹೇಳಿದ್ದಾರೆ. ಸ್ಥಳದಲ್ಲಿ ರಕ್ಷಣಾ ತಂಡಗಳು ಮತ್ತು ಅಗ್ನಿಶಾಮಕ ಸಿಬ್ಬಂದಿ ಬೀಡು ಬಿಟ್ಟಿದ್ದಾರೆ

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com