ಸೆಂಟ್ರಲ್ ವಿಸ್ಟಾ ಯೋಜನೆಗೆ ದೆಹಲಿ ಹೈಕೋರ್ಟ್ ಅಸ್ತು: 'ಇದು ಅತ್ಯಗತ್ಯ ಮತ್ತು ಅವಶ್ಯಕ' ಎಂದು ಅರ್ಜಿ ಹಾಕಿದವರಿಗೇ ದಂಡ!

ಸೆಂಟ್ರಲ್ ವಿಸ್ಟಾ ಯೋಜನೆಯನ್ನು ಮುಂದುವರಿಸಲು ನಿರ್ಮಾಣ ಕಾಮಗಾರಿ ಕೆಲಸಗಳಿಗೆ ದೆಹಲಿ ಹೈಕೋರ್ಟ್ ಸೋಮವಾರ ಹಸಿರು ನಿಶಾನೆ ತೋರಿಸಿದೆ. 
ದೆಹಲಿಯ ರಾಜ್ ಪಥ್ ನಲ್ಲಿ ನಡೆಯುತ್ತಿರುವ ಸೆಂಟ್ರಲ್ ವಿಸ್ಟಾ ಕಾಮಗಾರಿ
ದೆಹಲಿಯ ರಾಜ್ ಪಥ್ ನಲ್ಲಿ ನಡೆಯುತ್ತಿರುವ ಸೆಂಟ್ರಲ್ ವಿಸ್ಟಾ ಕಾಮಗಾರಿ
Updated on

ನವದೆಹಲಿ: ಸೆಂಟ್ರಲ್ ವಿಸ್ಟಾ ಯೋಜನೆಯನ್ನು ಮುಂದುವರಿಸಲು ನಿರ್ಮಾಣ ಕಾಮಗಾರಿ ಕೆಲಸಗಳಿಗೆ ದೆಹಲಿ ಹೈಕೋರ್ಟ್ ಸೋಮವಾರ ಹಸಿರು ನಿಶಾನೆ ತೋರಿಸಿದೆ.

ಸೆಂಟ್ರಲ್ ವಿಸ್ಟಾ ಯೋಜನೆ ದೇಶದ ಯೋಜನೆಯಾಗಿದ್ದು ಅವಶ್ಯಕ ಮತ್ತು ಅತ್ಯಗತ್ಯವಾಗಿದೆ ಎಂದು ಹೈಕೋರ್ಟ್ ಹೇಳಿದೆ. ಮುಖ್ಯ ನ್ಯಾಯಮೂರ್ತಿ ಡಿ ಎನ್ ಪಟೇಲ್ ಮತ್ತು ನ್ಯಾಯಮೂರ್ತಿ ಜ್ಯೋತಿ ಸಿಂಗ್ ನೇತೃತ್ವದ ನ್ಯಾಯಪೀಠ, ಕೊರೋನಾ ವೈರಸ್ ಸಾಂಕ್ರಾಮಿಕ ನಡುವೆ ಸೆಂಟ್ರಲ್ ವಿಸ್ಟಾ ಕಾಮಗಾರಿಯನ್ನು ಸ್ಥಗಿತಗೊಳಿಸುವಂತೆ ಕೋರಿ ಸಲ್ಲಿಸಲಾಗಿದ್ದ ಅರ್ಜಿಯನ್ನು ವಜಾಗೊಳಿಸಿದೆ.

ಅರ್ಜಿಯು ಪ್ರೇರಿತ: ಸೆಂಟ್ರಲ್ ವಿಸ್ಟಾ ಯೋಜನೆ ಸ್ಥಗಿತಗೊಳಿಸುವಂತೆ ಕೋರಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗೆ ಕೋರ್ಟ್ ಛೀಮಾರಿ ಹಾಕಿದೆ. ಇದೊಂದು ಪ್ರಾಮಾಣಿಕ ಅರ್ಜಿ ಅನ್ನಿಸುವುದಿಲ್ಲ, ಯಾರದ್ದೋ ಪ್ರೇರಣೆಯಿಂದ ಹಾಕಲಾಗಿದೆ ಎಂದು ಕಂಡುಬರುತ್ತಿದೆ ಎಂದು ಹೇಳಿ ಅರ್ಜಿ ಹಾಕಿದವರಿಗೆ 1 ಲಕ್ಷ ರೂಪಾಯಿ ದಂಡ ವಿಧಿಸಿದೆ.

ಶಪೂರ್ಜಿ ಪಲ್ಲೊಂಜಿ ಗ್ರೂಪ್ ಗೆ ನೀಡಲಾಗಿರುವ ಕಾಮಗಾರಿ ಗುತ್ತಿಗೆಯಲ್ಲಿ, ಈ ವರ್ಷ ನವೆಂಬರ್ ಹೊತ್ತಿಗೆ ಕಾಮಗಾರಿ ಕೆಲಸ ಮುಗಿಯಬೇಕಾಗಿದೆ, ಹೀಗಾಗಿ ಕೆಲಸ ನಿಲ್ಲಿಸುವುದು ಬೇಡ ಎಂದು ಹೇಳಿದೆ.

ಸೆಂಟ್ರಲ್ ವಿಸ್ಟಾ ಯೋಜನೆಯ ಕಾನೂನಾತ್ಮಕತೆಯನ್ನು ಸುಪ್ರೀಂ ಕೋರ್ಟ್ ಈಗಾಗಲೇ ಎತ್ತಿ ಹಿಡಿದಿದೆ ಎಂದು ಕೂಡ ದೆಹಲಿ ಹೈಕೋರ್ಟ್ ಹೇಳಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com