ವರುಣ್ ಗಾಂಧಿ (ಸಂಗ್ರಹ ಚಿತ್ರ)
ವರುಣ್ ಗಾಂಧಿ (ಸಂಗ್ರಹ ಚಿತ್ರ)

ರೈತರ ನೋವನ್ನು ಅರ್ಥಮಾಡಿಕೊಳ್ಳಲು ಅವರ ಮಾತನ್ನು ಆಲಿಸಬೇಕು: ಪಕ್ಷದ ವಿರುದ್ಧ ಮತ್ತೆ ಕಿಡಿಕಾರಿದ ವರುಣ್ ಗಾಂಧಿ!

ಬಿಜೆಪಿಯ ಲೋಕಸಭಾ ಸಂಸದ ವರುಣ್ ಗಾಂಧಿ ಮತ್ತೆ ರೈತರ ಪರ ಧ್ವನಿ ಎತ್ತಿದ್ದಾರೆ. ಸೋಮವಾರ ಅವರು ಲಖಿಂಪುರ ಮತ್ತು ಪಿಲಿಭಿತ್ ಗಡಿಭಾಗದ ರೈತರೊಂದಿಗೆ ಅವರ ಸಮಸ್ಯೆಗಳ ಕುರಿತು ಚರ್ಚಿಸಿದರು.
Published on

ನವದೆಹಲಿ: ಬಿಜೆಪಿಯ ಲೋಕಸಭಾ ಸಂಸದ ವರುಣ್ ಗಾಂಧಿ ಮತ್ತೆ ರೈತರ ಪರ ಧ್ವನಿ ಎತ್ತಿದ್ದಾರೆ.

ಸೋಮವಾರ ಅವರು ಲಖಿಂಪುರ ಮತ್ತು ಪಿಲಿಭಿತ್ ಗಡಿಭಾಗದ ರೈತರೊಂದಿಗೆ ಅವರ ಸಮಸ್ಯೆಗಳ ಕುರಿತು ಚರ್ಚಿಸಿದರು.

ಈ ಕುರಿತು ಮಾತನಾಡಿದ ಅವರು, ರೈತರ ನೋವಿಗೆ ಕಿವಿಗೊಡಬೇಕು. ರೈತರ ಕಷ್ಟ ತಿಳಿಯಲು ಮೊದಲು ಅವರ ಮಾತುಗಳನ್ನು ಕೇಳಿಸಿಕೊಳ್ಳಬೇಕು. ಕನಿಷ್ಠ ಬೆಂಬಲ ಬೆಲೆ ಸಿಗಲಿದೆ ಎಂಬುದಕ್ಕೆ ಕಾನೂನು ರಕ್ಷಣೆ ಬೇಕಾಗಿದೆ.

ಇದರಿಂದ ಮಾತ್ರವೇ ಸಗಟು ಮಾರುಕಟ್ಟೆಯಲ್ಲಿ ರೈತರ ಶೋಷಣೆ ತಪ್ಪಲಿದೆ ಎಂದು ಹೇಳಿದರು. ಕಳೆದ ಕೆಲವು ದಿನಗಳಿಂದ ವರುಣಗಾಂಧಿ ಸತತವಾಗಿ ರೈತರ ಬೇಡಿಕೆಗಳಿಗೆ ಬೆಂಬಲ ನೀಡುತ್ತಿದ್ದಾರೆ.

ಇದಕ್ಕೂ ಮುನ್ನ ಅಕ್ಟೋಬರ್ 29ರಂದು ಮಂಡಿಗೆ ಭೇಟಿ ನೀಡಿ ಪರಿಸ್ಥಿತಿ ಅವಲೋಕಿಸಿದ್ದರು. ಪಿಲಿಭಿತ್ ಸೇರಿದಂತೆ 17 ಜಿಲ್ಲೆಗಳಲ್ಲಿ ರೈತ ತನ್ನ ಭತ್ತದ ಬೆಳೆಗೆ ತಾನೇ ಬೆಂಕಿ ಹಚ್ಚುತ್ತಿದ್ದಾನೆ ಎಂದು ಮಂಡಿ ನೌಕರರಿಗೆ ಹೇಳಿದ್ದರು. ಇದು ಇಡೀ ರಾಜ್ಯಕ್ಕೆ ದೊಡ್ಡ ಅವಮಾನ ಎಂದು ಅವರು ಹೇಳಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Advertisement

X
Kannada Prabha
www.kannadaprabha.com