ಉಪಚುನಾವಣೆ ಮತ ಎಣಿಕೆ: ವಿಜಯೋತ್ಸವ ಮೆರವಣಿಗೆಗಳ ಮೇಲೆ ಚುನಾವಣಾ ಆಯೋಗ ನಿಷೇಧ

ವಿವಿಧ ರಾಜ್ಯಗಳಲ್ಲಿ ಲೋಕಸಭಾ ಹಾಗೂ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯ ಮತ ಎಣಿಕೆ ಪ್ರಕ್ರಿಯೆ ಮುಂದುವರೆದಿದ್ದು, ಫಲಿತಾಂಶ ಹೊರಬಿದ್ದ ನಂತರ ವಿಜಯೋತ್ಸವದ ಮೆರವಣಿಗೆಗಳನ್ನು ನಡೆಸದಂತೆ ಕ್ರಮ ಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ಚುನಾವಣಾ ಆಯೋಗ ಮಂಗಳವಾರ ಸೂಚನೆ ನೀಡಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
Updated on

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಲೋಕಸಭಾ ಹಾಗೂ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯ ಮತ ಎಣಿಕೆ ಪ್ರಕ್ರಿಯೆ ಮುಂದುವರೆದಿದ್ದು, ಫಲಿತಾಂಶ ಹೊರಬಿದ್ದ ನಂತರ ವಿಜಯೋತ್ಸವದ ಮೆರವಣಿಗೆಗಳನ್ನು ನಡೆಸದಂತೆ ಕ್ರಮ ಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ಚುನಾವಣಾ ಆಯೋಗ ಮಂಗಳವಾರ ಸೂಚನೆ ನೀಡಿದೆ.

ಕೋವಿಡ್‌–19 ಪ್ರಸರಣ ತಡೆಯುವ ಸಂಬಂಧ ವಿಜಯೋತ್ಸವ ಹಾಗೂ ಮೆರವಣಿಗೆಗಳ ಮೇಲೆ ಈಗಾಗಲೇ ನಿಷೇಧ ಹೇರಿರುವುದನ್ನು ಆಯೋಗವು ಚುನಾವಣಾ ಕರ್ತವ್ಯ ನಿರತ ಅಧಿಕಾರಿಗಳಿಗೆ ನೆನಪಿಸಿದೆ.

ಕರ್ನಾಟಕದ ಹಾನಗಲ್‌, ಸಿಂದಗಿ ಸೇರಿದಂತೆ ವಿವಿಧ ರಾಜ್ಯಗಳ 29 ವಿಧಾನಸಭಾ ಕ್ಷೇತ್ರಗಳು ಹಾಗೂ 3 ಲೋಕಸಭಾ ಕ್ಷೇತ್ರಗಳಿಗೆ ನಡೆದ ಉಪಚುನಾವಣೆಯ ಮತ ಎಣಿಕೆ ಕಾರ್ಯ ಪ್ರಗತಿಯಲ್ಲಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com