ಆಂಧ್ರ ಉಪ ಚುನಾವಣೆ: ವೈಎಸ್‌ಆರ್‌ ಕಾಂಗ್ರೆಸ್ ಅಭ್ಯರ್ಥಿ 90 ಸಾವಿರ ಮತಗಳ ಅಂತರದಿಂದ ಗೆಲುವು; ಕಾಂಗ್ರೆಸ್, ಬಿಜೆಪಿಗೆ ಠೇವಣಿ ನಷ್ಟ

ಆಂಧ್ರ ಪ್ರದೇಶದ ಬದ್ವೇಲ್ (ಎಸ್‌ಸಿ) ವಿಧಾನಸಭಾ ಕ್ಷೇತ್ರಕ್ಕೆ ನಡೆದ ಉಪ ಚುನಾವಣೆಯಲ್ಲಿ ಆಡಳಿತಾರೂಢ ವೈಎಸ್‌ಆರ್‌ ಕಾಂಗ್ರೆಸ್ ಅಭ್ಯರ್ಥಿ 90 ಸಾವಿರಕ್ಕೂ ಅಧಿಕ ಮತಗಳ ಅಂತರದಿಂದ ಭರ್ಜರಿ ಗೆಲುವು ಸಾಧಿಸುವ ಮೂಲಕ...
ಆಂಧ್ರ ಸಿಎಂ ಜಗನ್ ಮೋಹನ್ ರೆಡ್ಡಿ ಜತೆ ಜಿ ಸುಧಾ
ಆಂಧ್ರ ಸಿಎಂ ಜಗನ್ ಮೋಹನ್ ರೆಡ್ಡಿ ಜತೆ ಜಿ ಸುಧಾ

ಕಡಪ: ಆಂಧ್ರ ಪ್ರದೇಶದ ಬದ್ವೇಲ್ (ಎಸ್‌ಸಿ) ವಿಧಾನಸಭಾ ಕ್ಷೇತ್ರಕ್ಕೆ ನಡೆದ ಉಪ ಚುನಾವಣೆಯಲ್ಲಿ ಆಡಳಿತಾರೂಢ ವೈಎಸ್‌ಆರ್‌ ಕಾಂಗ್ರೆಸ್ ಅಭ್ಯರ್ಥಿ 90 ಸಾವಿರಕ್ಕೂ ಅಧಿಕ ಮತಗಳ ಅಂತರದಿಂದ ಭರ್ಜರಿ ಗೆಲುವು ಸಾಧಿಸುವ ಮೂಲಕ ಕ್ಷೇತ್ರವನ್ನು ಉಳಿಸಿಕೊಂಡಿದೆ. ಆದರೆ ಬಿಜೆಪಿ ಮತ್ತು ಕಾಂಗ್ರೆಸ್ ಎರಡೂ ಠೇವಣಿ ಕಳೆದುಕೊಂಡಿವೆ.

ವೈಎಸ್‌ಆರ್‌ ಕಾಂಗ್ರೆಸ್ ಅಭ್ಯರ್ಥಿ ಡಾ ಜಿ ಸುಧಾ ಅವರು ತಮ್ಮ ಸಮೀಪದ ಪ್ರತಿಸ್ಪರ್ಧಿ ಬಿಜೆಪಿಯ ಪಿ ಸುರೇಶ್ ವಿರುದ್ಧ ಮೊದಲ ಸುತ್ತಿನಿಂದಲೇ ಮುನ್ನಡೆ ಕಾಯ್ದುಕೊಂಡರು. ಪ್ರಮುಖ ಪ್ರತಿಪಕ್ಷವಾದ ಟಿಡಿಪಿ ಮತ್ತು ಜನಸೇನಾ ಪಕ್ಷಗಳು ಉಪಚುನಾವಣೆಯಲ್ಲಿ ಸ್ಪರ್ಧಿಸಿರಲಿಲ್ಲ.

ಈ ವರ್ಷದ ಮಾರ್ಚ್‌ನಲ್ಲಿ ವೈಎಸ್‌ಆರ್‌ಸಿ ಶಾಸಕ ಡಾ ಜಿ ವೆಂಕಟಸುಬ್ಬಯ್ಯ ಅವರ ನಿಧನದಿಂದ ತೆರವಾಗಿದ್ದ ಬದ್ವೇಲ್ ಕ್ಷೇತ್ರಕ್ಕೆ ಉಪಚುನಾವಣೆ ನಡೆದಿತ್ತು, ವೆಂಕಟಸುಬ್ಬಯ್ಯ ಅವರ ಪತ್ನಿ ಡಾ.ಸುಧಾ ಅವರು ಉಪಚುನಾವಣೆಯಲ್ಲಿ ವೈಎಸ್ ಆರ್ ಕಾಂಗ್ರೆಸ್ ನಿಂದ ಸ್ಪರ್ಧಿಸಿದ್ದರು. ಬಿಜೆಪಿ ಯುವ ಮುಖಂಡ ಪಿ.ಸುರೇಶ್ ಅವರನ್ನು ಕಣಕ್ಕಿಳಿಸಿತ್ತು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com