ಚೆನ್ನೈ ನಲ್ಲಿ ಭಾರಿ ಮಳೆ: ರಕ್ಷಣೆ, ಪರಿಹಾರ ಕಾರ್ಯಾಚರಣೆಗಳಿಗೆ ಕೇಂದ್ರದಿಂದ ಅಗತ್ಯ ನೆರವು ಘೋಷಿಸಿದ ಪ್ರಧಾನಿ

ಹಲವು ವರ್ಷಗಳ ಬಳಿಕ ಸುರಿದ ಭಾರಿ ಮಳೆಯ ಪರಿಣಾಮ ತಮಿಳುನಾಡು ರಾಜ್ಯದ ಹಲವು ಪ್ರದೇಶಗಳು ಜಲಾವೃತಗೊಂಡಿದೆ.
ಚೆನ್ನೈ ನಲ್ಲಿ ಜಲಾವೃತಗೊಂಡಿರುವ ರಸ್ತೆಗಳು
ಚೆನ್ನೈ ನಲ್ಲಿ ಜಲಾವೃತಗೊಂಡಿರುವ ರಸ್ತೆಗಳು
Updated on

ಚೆನ್ನೈ: ಹಲವು ವರ್ಷಗಳ ಬಳಿಕ ಸುರಿದ ಭಾರಿ ಮಳೆಯ ಪರಿಣಾಮ ತಮಿಳುನಾಡು ರಾಜ್ಯದ ಹಲವು ಪ್ರದೇಶಗಳು ಜಲಾವೃತಗೊಂಡಿದೆ. 

24 ಗಂಟೆಗಳಲ್ಲಿ ಭಾರಿ ಪ್ರಮಾಣದ ಮಳೆಯಾಗಿದ್ದು, ಮೂರು ನಗರಗಳ ಜಲಾಶಯಗಳಿಂದ ಹೆಚ್ಚುವರಿ ನೀರನ್ನು ಹೊರಬಿಡಲಾಗಿದೆ.

ಈಶಾನ್ಯ ಮುಂಗಾರು ಪ್ರಾರಂಭವಾದಾಗಿನಿಂದಲೂ, ಅಕ್ಟೋಬರ್ ತಿಂಗಳಲ್ಲಿ ತಮಿಳುನಾಡು, ಪುದುಚೆರಿಗಳ ಭಾಗದಲ್ಲಿ ಎಂದಿಗಿಂತಲೂ ಶೇ.43 ರಷ್ಟು ಹೆಚ್ಚು ಮಳೆಯಾಗಿದೆ.

6 ವರ್ಷಗಳ ಬಳಿಕ ತಮಿಳುನಾಡಿನಲ್ಲಿ ಈ ಪ್ರಮಾಣದಲ್ಲಿ ಮಳೆಯಾಗಿದೆ. ಹಲವೆಡೆ ನಗರಗಳು ಜಲಾವೃತಗೊಂಡಿದ್ದು ಜನಜೀವನ ಅಸ್ತವ್ಯಸ್ತಗೊಂಡಿರುವ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿ ಟ್ವೀಟ್ ಮಾಡಿದ್ದು, ತಮಿಳುನಾಡಿಗೆ ಪರಿಸ್ಥಿತಿ ನಿಭಾಯಿಸುವುದಕ್ಕಾಗಿ ಅಗತ್ಯ ಸಹಕಾರ ನೀಡುವುದಾಗಿ ಭರವಸೆ ನೀಡಿದ್ದಾರೆ. 

"ತಮಿಳುನಾಡು ಸಿಎಂ ಎಂ ಕೆ ಸ್ಟ್ಯಾಲಿನ್ ಅವರೊಂದಿಗೆ ಮಾತನಾಡಿದೆ. ಹೆಚ್ಚಿನ ಪ್ರಮಾಣದಲ್ಲಿ ಮಳೆಯಾಗುತ್ತಿರುವುದರಿಂದ ಉಂಟಾಗಿರುವ ಪರಿಣಾಮಗಳ ಬಗ್ಗೆ ಚರ್ಚಿಸಲಾಯಿತು. ರಕ್ಷಣಾ ಕಾರ್ಯಾಚರಣೆ ಹಾಗೂ ಪರಿಹಾರ ಕಾರ್ಯಗಳಲ್ಲಿ ಕೇಂದ್ರದಿಂದ ತಮಿಳುನಾಡಿಗೆ ಅಗತ್ಯ ಭರವಸೆ ನೀಡಲಾಗುವುದು" ಎಂದು ಮೋದಿ ಭರವಸೆ ನೀಡಿದ್ದಾರೆ.

ಇದೇ ವೇಳೆ ತಮಿಳುನಾಡು ಸಿಎಂ ಜಲಾವೃತಗೊಂಡಿರುವ ಪ್ರದೇಶಗಳನ್ನು ಹಿರಿಯ ಅಧಿಕಾರಿಗಳೊಂದಿಗೆ ತೆರಳಿ ಪರಿಶೀಲನೆ ನಡೆಸಿ, ನೀರನ್ನು ಹೊರಹಾಕುವುದಕ್ಕೆ ಕ್ಷಿಪ್ರಗತಿಯ ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದಾರೆ.
 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com