ನಿರ್ಗತಿಕರಿಗೆ ಕೊರೊನಾ ಲಸಿಕೆ ಹಂಚಿಕೆ ಕಾರ್ಯಕ್ರಮ: ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ವರದಿ ಫಲಶ್ರುತಿ

ಹಲವು ಮಂದಿ ನಿರ್ಗತಿಕರು ನಿರಾಶ್ರಿತ ಶಿಬಿರಗಳಲ್ಲಿ, ನಿರ್ಗತಿಕರಿಗಾಗಿ ಮೀಸಲಿರುವ ಕ್ಯಾಂಪುಗಳಲ್ಲಿ ಆಶ್ರಯ ಪಡೆದರು. ಇವರಲ್ಲಿ ಅನೇಕ ಮಂದಿ ಕೊರೊನಾ ಲಸಿಕೆ ಪಡೆದುಕೊಂಡಿರಲಿಲ್ಲವಾದ್ದರಿಂದ ಕೊರೊನಾ ಹರಡುವ ಭೀತಿ ಎದುರಾಗಿತ್ತು. ಇದನ್ನು ಮನಗಂಡ ಇಂಡಿಯನ್ ಎಕ್ಸ್ ಪ್ರೆಸ್ ಸಂಸ್ಥೆ ಈ ಬಗ್ಗೆ ಸುದ್ದಿಯನ್ನು ಪ್ರಕಟಿಸಿತ್ತು.
ನಿರ್ಗತಿಕ ವ್ಯಕ್ತಿಗೆ ಕೊರೊನಾ ಲಸಿಕೆ ನೀಡುತ್ತಿರುವ ವೈದ್ಯೆ
ನಿರ್ಗತಿಕ ವ್ಯಕ್ತಿಗೆ ಕೊರೊನಾ ಲಸಿಕೆ ನೀಡುತ್ತಿರುವ ವೈದ್ಯೆ
Updated on

ತಿರುಚ್ಚಿ: ಕಳೆದ ಹಲವು ದಿನಗಳಿಂದ ಎಡಬಿಡದೆ ಸುರಿಯುತ್ತಿರುವ ಮಳೆಯಿಂದಾಗಿ ಕೇರಳ ರಾಜ್ಯಾದ್ಯಂತ ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿತ್ತು. ಭಾರೀ ಮಳೆಯಿಂದಾಗಿ ನಿರ್ಗತಿಕರು ವಸತಿ ಇಲ್ಲದೆ ನರಳುವಂತಾಗಿತ್ತು. 

ಹಲವು ಮಂದಿ ನಿರ್ಗತಿಕರು ನಿರಾಶ್ರಿತ ಶಿಬಿರಗಳಲ್ಲಿ, ನಿರ್ಗತಿಕರಿಗಾಗಿ ಮೀಸಲಿರುವ ಕ್ಯಾಂಪುಗಳಲ್ಲಿ ಆಶ್ರಯ ಪಡೆದರು. ನಗರದಾದ್ಯಂತ ಹರಡಿಕೊಂಡಿದ್ದ ಅನೇಕ ನಿರ್ಗತಿಕರು ಒಂದೇ ಸೂರಿನಡಿ ಆಶ್ರಯ ಪಡೆಯುವಂತಾಯಿತು.

ಇವರಲ್ಲಿ ಅನೇಕ ಮಂದಿ ಕೊರೊನಾ ಲಸಿಕೆ ಪಡೆದುಕೊಂಡಿರಲಿಲ್ಲವಾದ್ದರಿಂದ ಕೊರೊನಾ ಹರಡುವ ಭೀತಿ ಎದುರಾಗಿತ್ತು. ಇದನ್ನು ಮನಗಂಡ ಇಂಡಿಯನ್ ಎಕ್ಸ್ ಪ್ರೆಸ್ ಸಂಸ್ಥೆ ಈ ಬಗ್ಗೆ ಸುದ್ದಿಯನ್ನು ಪ್ರಕಟಿಸಿತ್ತು. ಇದೀಗ ತಿರುಚ್ಚಿಯಲ್ಲಿನ ನಿರ್ಗತಿಕ ಶಿಬಿರಗಳಲ್ಲಿನ ಮಂದಿಗೆ ಉಚಿತ ಕೊರೊನಾ ಲಸಿಕೆ ನೂಡುವ ಕಾರ್ಯಕ್ರಮವನ್ನು ನಗರಾಡಳಿತ ಹಮ್ಮಿಕೊಂಡಿದೆ. 

ನಗರಾಡಳಿತ ಕ್ರಮಕ್ಕೆ ಮೆಚ್ಚುಗೆ ವ್ಯಕ್ತವಾಗಿದೆ. ನಿರ್ಗತಿಕರು, ಭಿಕ್ಷುಕರು ನಗರಪ್ರದೇಶದಾದ್ಯಂತ ತಿರುಗಾಡುವುದರಿಂದ ಅವರಲ್ಲಿ ಒಬ್ಬರಿಗೆ ಕೊರೊನಾ ತಗುಲಿದರೂ ವ್ಯಾಪಕವಾಗಿ ಹರಡುವ ಸಾಧ್ಯತೆ ಹೆಚ್ಚು ಎಂದು ನಿವಾಸಿಗಳು ಅಭಿಪ್ರಾಯಪಟ್ಟಿದ್ದಾರೆ. ಅಲ್ಲದೆ ಎರಡು ಬಾರಿ ಲಸಿಕೆ ನೀಡುವ ಬಗ್ಗೆಯೂ ಮುತುವರ್ಜಿ ವಹಿಸಬೇಕಾಗಿ ಅವರು ಕೋರಿಕೊಂಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com