ಅಖಿಲೇಶ್ ಯಾದವ್ ಅವರ 'ಸಮಾಜವಾದಿ ವಿಜಯ ಯಾತ್ರೆ'ಗೆ ರಾಜ್ ಭರ್ ಸಾಥ್

ಸುಹೇಲ್‌ದೇವ್ ಭಾರತೀಯ ಸಮಾಜ ಪಕ್ಷದ(ಎಸ್‌ಬಿಎಸ್‌ಪಿ) ರಾಷ್ಟ್ರೀಯ ಅಧ್ಯಕ್ಷ ಓಂ ಪ್ರಕಾಶ್ ರಾಜ್‌ಭರ್ ಅವರು ಮಂಗಳವಾರ ಸಮಾಜವಾದಿ ಪಕ್ಷದ ಅಧ್ಯಕ್ಷ ಅಖಿಲೇಶ್ ಯಾದವ್ ಅವರೊಂದಿಗೆ 'ಸಮಾಜವಾದಿ ವಿಜಯ ಯಾತ್ರೆ'ಗೆ...
ಓಂ ಪ್ರಕಾಶ್ ರಾಜ್ಬರ್
ಓಂ ಪ್ರಕಾಶ್ ರಾಜ್ಬರ್
Updated on

ಲಖನೌ: ಸುಹೇಲ್‌ದೇವ್ ಭಾರತೀಯ ಸಮಾಜ ಪಕ್ಷದ(ಎಸ್‌ಬಿಎಸ್‌ಪಿ) ರಾಷ್ಟ್ರೀಯ ಅಧ್ಯಕ್ಷ ಓಂ ಪ್ರಕಾಶ್ ರಾಜ್‌ಭರ್ ಅವರು ಮಂಗಳವಾರ ಸಮಾಜವಾದಿ ಪಕ್ಷದ ಅಧ್ಯಕ್ಷ ಅಖಿಲೇಶ್ ಯಾದವ್ ಅವರೊಂದಿಗೆ 'ಸಮಾಜವಾದಿ ವಿಜಯ ಯಾತ್ರೆ'ಗೆ ತೆರಳಲಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ.

ಓಂ ಪ್ರಕಾಶ್ ರಾಜ್‌ಭರ್ ಅವರು ಅಖಿಲೇಶ್ ಯಾದವ್ ಅವರು ಗಾಜಿಪುರದಿಂದ ಉತ್ತರ ಪ್ರದೇಶದ ಅಜಂಗಢದವರೆಗೆ 'ಸಮಾಜವಾದಿ ವಿಜಯ ಯಾತ್ರೆ'ಯಲ್ಲಿ ಭಾಗವಹಿಸಲಿದ್ದಾರೆ.

ಮುಂಬರುವ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಗೂ ಮುನ್ನ ಸಮಾಜವಾದಿ ಪಕ್ಷ ಅಕ್ಟೋಬರ್ 12 ರಿಂದ ಈ ವಿಜಯ ಯಾತ್ರೆಯನ್ನು ಆರಂಭಿಸಿದೆ.

ಸಮಾಜವಾದಿ ಪಕ್ಷ(ಎಸ್‌ಪಿ) ಮತ್ತು ಸುಹೇಲ್‌ದೇವ್ ಭಾರತೀಯ ಸಮಾಜ ಪಕ್ಷ(ಎಸ್‌ಬಿಎಸ್‌ಪಿ) 2022ರ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಗೆ ಮೈತ್ರಿ ಮಾಡಿಕೊಂಡಿವೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com