ಕೇರಳ: ಆರ್‌ಎಸ್‌ಎಸ್ ಕಾರ್ಯಕರ್ತನ ಇರಿದು ಬರ್ಬರ ಹತ್ಯೆ!

ಕೇರಳದಲ್ಲಿ ಆರ್‌ಎಸ್‌ಎಸ್ ಕಾರ್ಯಕರ್ತನ ಇರಿದು ಬರ್ಬರವಾಗಿ ಹತ್ಯೆ ಮಾಡಲಾಗಿದೆ. 
ಮೃತ ಸಂಜೀತ್
ಮೃತ ಸಂಜೀತ್
Updated on

ಪಾಲಕ್ಕಾಡ್: ಕೇರಳದಲ್ಲಿ ಆರ್‌ಎಸ್‌ಎಸ್ ಕಾರ್ಯಕರ್ತನ ಇರಿದು ಬರ್ಬರವಾಗಿ ಹತ್ಯೆ ಮಾಡಲಾಗಿದೆ. 

ದಾಳಿಕೋರರನ್ನು ಇನ್ನೂ ಗುರುತಿಸಲಾಗಿಲ್ಲ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ. ಆರ್ ಎಸ್ ಎಸ್ ಕಾರ್ಯಕರ್ತನ ಹತ್ಯೆ ಪ್ರಕರಣ ಮುನ್ನೆಲೆಗೆ ಬಂದಿದೆ. 

ಮಾಹಿತಿಯ ಪ್ರಕಾರ, ಕಾರ್ಯಕರ್ತ ಇಂದು ಬೆಳಿಗ್ಗೆ 9 ಗಂಟೆ ಸುಮಾರಿಗೆ ತನ್ನ ಕುಟುಂಬದೊಂದಿಗೆ ತೆರಳುತ್ತಿದ್ದರು. ಈ ಸಂದರ್ಭದಲ್ಲಿ ಹೊಂಚು ಹಾಕಿದ ದಾಳಿಕೋರರು ಅವರ ಮೇಲೆ ದಾಳಿ ಮಾಡಿ ಹತ್ಯೆ ಮಾಡಿದ್ದಾರೆ. ಮೃತರನ್ನು 27 ವರ್ಷದ ಎಸ್ ಸಂಜೀತ್ ಎಂದು ಗುರುತಿಸಲಾಗಿದೆ.

ಸಂಜೀತ್ ರಾಷ್ಟ್ರೀಯ ಸ್ವಯಂಸೇವಕ ಸಂಘದ ಕಾರ್ಯಕರ್ತನಾಗಿ ತನ್ನ ಪ್ರದೇಶದಲ್ಲಿ ಸಕ್ರಿಯನಾಗಿದ್ದ ಎಂದು ಹೇಳಲಾಗುತ್ತಿದೆ. ಸಂಜೀತ್‌ನ ದೇಹದ ಮೇಲೆ ಹರಿತವಾದ ಆಯುಧಗಳಿಂದ ಹಲ್ಲೆ ನಡೆಸಿದ 50ಕ್ಕೂ ಹೆಚ್ಚು ಗುರುತುಗಳು ಪತ್ತೆಯಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ. ಹತ್ಯೆಯ ನಂತರ ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದ್ದು, ಪೊಲೀಸರು ಬಿಗಿ ಬಂದೋಬಸ್ತ್ ಮಾಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com