ಮಟನ್ ಚೀಲ ಹೊತ್ಯೊಯ್ದ ಬೀದಿ ನಾಯಿಯನ್ನು ನಿರ್ದಯವಾಗಿ ದೊಣ್ಣೆಯಿಂದ ಬಡಿದು ಕೊಂದ ವ್ಯಕ್ತಿ!

ಇಂದೋರ್‌ನಲ್ಲಿ ಬೀದಿ ನಾಯಿಯನ್ನು ದೊಣ್ಣೆಯಿಂದ ಹೊಡೆದು ಕೊಂದ ಆರೋಪದ ಮೇಲೆ 40 ವರ್ಷದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ. 
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
Updated on

ಇಂದೋರ್ (ಮಧ್ಯಪ್ರದೇಶ): ಇಂದೋರ್‌ನಲ್ಲಿ ಬೀದಿ ನಾಯಿಯನ್ನು ದೊಣ್ಣೆಯಿಂದ ಹೊಡೆದು ಕೊಂದ ಆರೋಪದ ಮೇಲೆ 40 ವರ್ಷದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ. 

ಆರೋಪಿಯ ಮನೆಗೆ ನುಗ್ಗಿದ್ದ ನಾಯಿ ಮೇಕೆ ಮಾಂಸದ ಚೀಲದೊಂದಿಗೆ ಪರಾರಿಯಾಗಿತ್ತು ಎಂದು ಪೊಲೀಸರು ತಿಳಿಸಿದ್ದಾರೆ. 

ವಿಜಯ ನಗರ ಪೊಲೀಸ್ ಠಾಣೆಯ ಪ್ರಭಾರಿ ತಹಜೀಬ್ ಖಾಜಿ ಮಾತನಾಡಿ, ಬೀದಿಯಲ್ಲಿ ತಿರುಗಾಡಿಕೊಂಡಿದ್ದ ನಾಯಿ ಭಾನುವಾರ ರಾತ್ರಿ ಜಗದೀಶ್ ಚೌಹಾಣ್ ಅಲಿಯಾಸ್ ಠಾಕೂರ್(40) ಎಂಬುವರ ಮನೆಗೆ ನುಗ್ಗಿ ಕುರಿ ಮಾಂಸದ ಚೀಲವನ್ನು ಬಾಯಿಗೆ ತುರುಕಿಕೊಂಡು ಅಲ್ಲಿಂದ ಪರಾರಿಯಾಗಿತ್ತು. ಇದರಿಂದ ಆಕ್ರೋಶಗೊಂಡ ಜಗದೀಶ್ ಹಿಂಬಾಲಿಸಿಕೊಂಡು ಬಂದು ನಾಯಿ ಸಾಯುವವರೆಗೂ ಕೋಲಿನಿಂದ ನಿರ್ದಯವಾಗಿ ಥಳಿಸಿದ್ದಾನೆ ಎಂದು ಹೇಳಿದರು.

ಪ್ರಾಣಿಗಳ ಮೇಲಿನ ದೌರ್ಜನ್ಯ ತಡೆ ಕಾಯ್ದೆ ಮತ್ತು ಭಾರತೀಯ ದಂಡ ಸಂಹಿತೆಯ ಸಂಬಂಧಿತ ನಿಬಂಧನೆಗಳ ಅಡಿಯಲ್ಲಿ ಚೌಹಾಣ್ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಲಾಗಿದೆ ಎಂದು ಎಸ್ಎಚ್ಒ ಹೇಳಿದರು. ಪೀಪಲ್ ಫಾರ್ ಅನಿಮಲ್ಸ್ ಇಂದೋರ್ ಘಟಕದ ಅಧ್ಯಕ್ಷ ಪ್ರಿಯಾಂಶು ಜೈನ್ ಅವರ ದೂರಿನ ಮೇರೆಗೆ ದೂರು ದಾಖಲಿಸಲಾಗಿದೆ ಎಂದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com